Wednesday, April 30, 2025
35.6 C
Bengaluru
LIVE
ಮನೆಸುದ್ದಿಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ

ಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ

ದೆಹಲಿ : ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದ ಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸದನದಲ್ಲಿ ಉಪಸ್ಥಿತರಿರುವ ವಿಪ್​ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್​ ಶಾಸಕರನ್ನು ಅನರ್ಹಗೊಳಿಸಿದ್ದು, ಕಟ್​​ ಮೋಷನ್​ ಮತ್ತು ಬಜೆಟ್​​ ಸಮಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ ಪರವಾಗಿ ಮತ ಚಲಾಯಿಸಿದ್ದರು. ಹಿಮಾಚಲ ಪ್ರದೇಶದ ಆರು ಬಂಡಾಯ ಶಾಸಕರು- ಸುಧೀರ್​​​ ಶರ್ಮಾ, ರವಿ ಠಕೂರ್​​, ಇಂದರ್​​ ದತ್​​ ಲಖನ್​​​ಪಾಲ್​, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ ಮತ್ತು ಚೈತನ್ಯ ಶರ್ಮಾ ಅವರು, ಹಿಮಾಚಲ ಪ್ರದೇಶ ಬಿಜೆಪಿ ಅಧ್ಯಕ್ಷ ರಾಜೀವ್​ ಬಿಂದಾಲ್​ ಮತ್ತು ಕೇಂದ್ರ ಸಚಿವ ಅನುರಾಗ್​ ಠಾಕೂರ್​​ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments