ರಾಜ್ಯಸುದ್ದಿ

ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ‌ ಕೊಂದ‌ ತಾಯಿ..!

ಧಾರವಾಡ : ತಾಯಿಯೊಬ್ಬರು ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಸಾಮೂಹಿಕ ಸಾವು ಸಂಭವಿಸಿದೆ.

ಸಾವಿತ್ರಿ ಸರಕಾರ (32) ಎಂಬವರೇ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡವರು. ಐದು ವರ್ಷದ ಮಗಳು ಸುಮ ಮತ್ತು ನಾಲ್ಕು ವರ್ಷದ ಮಗು ದರ್ಶನ್​ ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಮಕ್ಕಳನ್ನು ಕೊಂದ ಬಳಿಕ ಆಕೆ ತಾನೇ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿ ತಾಯಿಯೊಬ್ಬಳು ಮಕ್ಕಳನ್ನು ಕೊಂದು ತಾನೂ ಪ್ರಾಣ ಕಳೆದುಕೊಳ್ಳಲು ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button