Tuesday, June 24, 2025
26.6 C
Bengaluru
Google search engine
LIVE
ಮನೆರಾಜ್ಯಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ

ಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ

ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ ವಿದ್ಯಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 

ಗಂಗಾದರಪ್ಪ ಪಟ್ಟಣಶೆಟ್ಟಿ ಎಂಬುವವರ ಮಗ ಡಾ.ಶರಣಪ್ಪ ಹಾಗೂ ಹುಬ್ಬಳ್ಳಿ ಅಧ್ಯಾಪಕನಗರದ ಅರುಣಕುಮಾರ ಗಿರಿಯಾಪುರ ಅವರ ಪುತ್ರಿ ಡಾ.ಪೂಜಾ ಅವರ ಮದುವೆಯ ಕಾರ್ಯಕ್ರಮದಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.

800 ಗ್ರಾಂ ಚಿನ್ನ, ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ ಹಾಗೂ ಸುಮಾರು 50 ಲಕ್ಷ ರೂಪಾಯಿ ನಗದನ್ನು ಖದೀಮರು ದೋಚಿದ್ದಾರೆ. ಕಳ್ಳ ತನ್ನ ಬ್ಯಾಗಿನಲ್ಲಿ ಎಲ್ಲವನ್ನೂ ಹಾಕಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು. ವಿದ್ಯಾಗಿರಿ ಠಾಣೆ ಪೊಲೀಸರು ಪ್ರಕರಣದ ಕುರಿತು ವಿಷಯ ಸಂಗ್ರಹಿಸುತ್ತಿದ್ದು, ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments