Wednesday, April 30, 2025
34.5 C
Bengaluru
LIVE
ಮನೆಕ್ರೈಂ ಸ್ಟೋರಿಸಹೋದರಿಯನ್ನು ಯಾಕೆ ಚುಡಾಯಿಸುತ್ತೀರಿ ಎಂದಿದ್ದಕ್ಕೆ ಅಣ್ಣನ ಮೇಲೆ ಹಲ್ಲೆ

ಸಹೋದರಿಯನ್ನು ಯಾಕೆ ಚುಡಾಯಿಸುತ್ತೀರಿ ಎಂದಿದ್ದಕ್ಕೆ ಅಣ್ಣನ ಮೇಲೆ ಹಲ್ಲೆ

ಗದಗ: ಕಾನೂನು ಸಚಿವರ ತವರಲ್ಲೆ ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಫುಡಿ ರೌಡಿಗಳ ಅಟ್ಟಹಾಸ ನಡೆದಿದೆ. ಕಿಡೆಗೇಡಿಗಳ ಗುಂಪೊಂದು 20ವರ್ಷದ ಯುವಕನ್ನು ಅಟ್ಟಾಡಿಸಿ ಹಲ್ಲೆ ಮಾಡಲಾಗಿದೆ.

ಹಲ್ಲೆಗೋಳಗಾದ ಯುವಕರ ತೇಜಸ್ ಮೇಹರವಾಡೆ(20) ಸದ್ಯ ಆಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮದ್ಯೆ ಹೊರಾಡುತ್ತಿದ್ದಾನೆ. ಸಹೋದರಿಗೆ ಯಾಕೆ ಚುಡಾಯಾಯಿಸುತ್ತೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. 8 ಯುವಕರ ಗುಂಪಿನಿಂದ ಹಲ್ಲೆ ಮಾಡಲಾಗಿದೆ. ಸದ್ಯ ಬೆಟಗೇರಿ ಪೋಲಿಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಾಯಾಗಿದ್ದು, ಇನ್ನೂಳಿದ ಐವರ ಹುಡುಕಾಟಕ್ಕೆ ಬಲೆ ಬಿಸಿದ್ದಾರೆ. ಪುಡಿ ರೌಡಿಗಳ ಅಟ್ಟಹಾಸಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬೆಟಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments