Sunday, June 29, 2025
26.4 C
Bengaluru
Google search engine
LIVE
ಮನೆರಾಜ್ಯಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಗದಗ : ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಶ್ರೀರಾಮ ಸಂಘಟನೆಯಿಂದ ನಗರದ ಮುಳುಗುಂದ ನಾಕಾದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಪಾದಯಾತ್ರೆ ಮಾಡುವ ಮೂಲಕ ಮನವಿ ಸಲ್ಲಿಸಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ 35 ಟನ್ ಗೋಮಾಂಸ ವಾಹನ ಹಿಡಿದ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಕೇಸ್ ಹಾಕಿ ಹಿಂಸೆ ನೀಡಲಾಗಿದೆ. ಜೊತೆಗೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರಿಗೆ ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗೆ ಪ್ರವೇಶ ನೀಡದೆ ನಿರ್ಬಂಧ ಹೇರಿದೆ. ಶ್ರೀರಾಮ ಸೇನೆಯ ರಾಜ್ಯ ಅಧ್ಯಕ್ಷ ಗಂಗಾಧರ್ ಕುಲಕರ್ಣಿ ಅವರಿಗೆ ಚಿಕ್ಕಮಗಳೂರು ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಲಾಗಿದ್ದು ಹೀಗೆ ನಾನಾ ರೀತಿಯಲ್ಲಿ ಹಿಂದೂ ಸಂಘಟನೆಯ ಮುಖಂಡರುಗಳಿಗೆ ರಾಜ್ಯ ಸರ್ಕಾರ ಹಿಂಸೆ ನೀಡುತ್ತಿದೆ ಎಂದು ಶ್ರೀ ರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೂ ಖಾನಪ್ಪನವರ ಆಕ್ರೋಶ ವ್ಯಕ್ತಪಡಿಸಿದರು.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments