Wednesday, April 30, 2025
24 C
Bengaluru
LIVE
ಮನೆರಾಜಕೀಯಅನಂತ್ ಕುಮಾರ್​ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ

ಅನಂತ್ ಕುಮಾರ್​ ರಾಜೀನಾಮೆಗೆ ಕಾಂಗ್ರೆಸ್ ಮುಖಂಡರ ಆಗ್ರಹ

ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಅನಂತ್ ಕುಮಾರ್​ ಹೆಗಡೆ ಈ ಹಿಂದಿನಿಂದಲೂ ಸಂವಿಧಾನ ಬದಲಾವಣೆ ಮಾತುಗಳನ್ನು ಆಡುತ್ತಲೇ ಬರುತ್ತಿದ್ದಾರೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಈ ಹಿಂದಿನಿಂದಲೂ ಸಂವಿಧಾನ ಬದಲಾವಣೆ ಮಾತುಗಳನ್ನು ಆಡುತ್ತಲೇ ಬರುತ್ತಿದ್ದಾರೆ. ಜಗತ್ತಿಗೆ ಮಾದರಿ ಸಂವಿಧಾನವನ್ನು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್​ ಅವರು ನಮ್ಮ ದೇಶಕ್ಕೆ ನೀಡಿದ್ದಾರೆ ಎಂದರು.

ಬಿಜೆಪಿ ಹಾಗೂ ಸಂಸದ ಅನಂತ್ ಕುಮಾರ್ ಹೆಗಡೆ ಮಾತ್ರ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಇದೂ ಸಂವಿಧಾನ ಗೌರವಿಸುವ ದೇಶದ ಜನತೆಗೆ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್​​ ಅವರಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments