Wednesday, April 30, 2025
24 C
Bengaluru
LIVE
ಮನೆರಾಜ್ಯಹುಬ್ಬಳ್ಳಿಯಲ್ಲಿ ಪ್ರಮೋದ್​ ಮುತಾಲಿಕ್​ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಪ್ರಮೋದ್​ ಮುತಾಲಿಕ್​ ವಿರುದ್ಧ ಪ್ರತಿಭಟನೆ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ವಿರುದ್ಧ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಿದರು.

ಪ್ರಸಾದ್ ಅಬ್ಬಯ್ಯ ಅಭಿಮಾನಿ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರಮೋದ್ ಮುತಾಲಿಕ‌ ಅವರು ದಲಿತ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ದಲಿತ ಶಾಸಕ ಪ್ರಸಾದ್ ಅಬ್ಬಯ್ಯರವರಿಗೆ ಅವಮಾನ ಹೇಳಿಕೆ ನೀಡಿದ್ದಾರೆ ಎಂದು ನಗರದ ಮಿನಿವಿಧಾನಸೌಧ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಹು-ಧಾ ಪೂರ್ವ ಕ್ಷೇತ್ರದಲ್ಲಿ ಅಭಿವೃದ್ಧಿ ಹರಿಕಾರರಾಗಿ ಗುರುತಿಸಿಕೊಂಡಿರುವ ಅಬ್ಬಯ್ಯವರಿಗೆ ಅಬ್ಬಯ್ಯಾನೋ ಅಥವಾ ಅಬ್ದುಲ್ಲಾನೋ ಎಂದು ಪದ ಬಳಕೆ ಮಾಡಿದ್ದಾರೆ. ಇದು ಕ್ಷೇತ್ರದ ಮತದಾರರಿಗೆ ಮಾಡಿರುವ ಅವಮಾನವಾಗಿದೆ ಎಂದು ಪ್ರಮೋದ್​ ಮುತಾಲಿಕ್​ ವಿರುದ್ಧ ಕಿಡಿಕಾರಿದರು.

ಈ ಕುರಿತು ತಹಶಿಲ್ದಾರ ಮೂಲಕ ಗೃಹ ಮಂತ್ರಿಗೆ ಹೋರಾಟಗಾರರು ಮನವಿ ಸಲ್ಲಿಸಿದ್ದು, ಅಬ್ಬಯ್ಯ ಅವರ ಬಗ್ಗೆ ಅವಮಾನ ಮಾಡುವ ಹೇಳಿಕೆ ನೀಡಿರುವ ಮುತಾಲಿಕ್​ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments