Thursday, June 26, 2025
26.7 C
Bengaluru
Google search engine
LIVE
ಮನೆರಾಜಕೀಯಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್​ನಿಂದ ಸಾಲ ಪಡೆದ ಆರೋಪದ ಮೇಲೆ ರಮೇಶ್​ ಜಾರಕಿಹೊಳಿ ಮೇಲೆ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಅನ್ನೋವವರು ರಮೇಶ್​ ಜಾರಕಿಹೊಳಿ ಮೇಲೆ ಕೇಸ್‌ ದಾಖಲಿಸಿದ್ದಾರೆ..

 

ಐಪಿಸಿ ಸೆಕ್ಷನ್​ 420 ಕೇಸ್​ನಲ್ಲಿ ಜಾರಕಿಹೊಳಿ A1 ಆಗಿದ್ದಾರೆ.ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್​ನಿಂದ 2013 ರಿಂದ 2017ರವರೆಗೆ 232 ಕೋಟಿ 88 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲಾಗಿತ್ತು. ಇದನ್ನು ವಾಪಸ್ ಮಾಡದ ಹಿನ್ನೆಲೆಯಲ್ಲಿ 2023ರ ವೇಳೆಗೆ 439 ಕೋಟಿ 7 ಲಕ್ಷ ರೂ.ಗಳ ಸಾಲದ ಮೊತ್ತ ಬಾಕಿ ಉಳಿದುಕೊಂಡಿದೆ.

ಬ್ಯಾಂಕ್​ಗೆ ಸಾಲ ಮರು ಪಾವತಿ ಮಾಡದೆ, ಮೋಸ ಮಾಡುವ ಉದ್ದೇಶದಿಂದ ಯಾವುದೇ ಮಾಹಿತಿ ನೀಡದೆ ಆಡಳಿತ ಮಂಡಳಿ ಹುದ್ದೆಗಳಿಂದ ಹೊರ ಬಂದಿದ್ದಾರೆ. ಈ ಮೂಲಕ ಬ್ಯಾಂಕ್​ನವರಿಗೆ ನಂಬಿಕೆ ದ್ರೋಹ ಮಾಡಿದ್ದಾರೆಂದು ಆರೋಪಿಸಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಕೇಸ್ ಹಾಕಿದ್ದಾರೆ.

 

ಬೆಳಗಾವಿಯ ಗೋಕಾಕ್​ನ ಶುಗರ್ ಫ್ಯಾಕ್ಟರಿಯಾದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಕಾರ್ಖಾನೆಯನ್ನು ಸ್ಥಾಪನೆ ಹಾಗೂ ವಿಸ್ತರಣೆ ನಿರ್ವಹಣೆಗಾಗಿ ಸಾಲ ಪಡೆದಿದ್ದರು. ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ, ವಸಂತ್ ವಿ.ಪಾಟೀಲ್, ಶಂಕರ್ ಪವಾಡೆ ಹಾಗೂ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್​ನ ಇಬ್ಬರು ಪದಾಧಿಕಾರಿಗಳ ವಿರುದ್ಧ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments