Wednesday, April 30, 2025
24 C
Bengaluru
LIVE
ಮನೆರಾಜಕೀಯಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ನಂದನಗೌಡ, ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮಾರ್ಚ್ 24 ರಂದು ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಗ್ಯಾನನಗೌಡ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದರು. ಜೊತೆಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಧ್ಯ ಸಚಿವ ಶಿವರಾಜ ತಂಗಡಗಿ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments