Monday, June 30, 2025
28.7 C
Bengaluru
Google search engine
LIVE
ಮನೆಸುದ್ದಿಶಬರಿಮಲೆಯಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪನ ಭಕ್ತರು

ಶಬರಿಮಲೆಯಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪನ ಭಕ್ತರು

ಶಬರಿಮಲೆ : ಶಬರಿಮಲೆಯಲ್ಲಿ ಸನ್ನಿಧಿ ಮತ್ತು ಇತರ ವೀಕ್ಷಣಾ ಸ್ಥಳಗಳು ಸೇರದಂತೆ ಸಾವಿರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿಯನ್ನು ವೀಕ್ಷಿಸಿದರು. ಮಕರ ಜ್ಯೋತಿ ಕಾಣುತ್ತಿದ್ದಂತೆ ಭಕ್ತರು ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಕೂಗಿ ಮಕರ ಜ್ಯೋತಿಯ ದರ್ಶನ ಪಡೆದರು. ದೀಪಾರಾಧನೆಯ ನಂತರ 6:30ಕ್ಕೆ ಗರ್ಭಗುಡಿಯ ಬಾಗಿಲು ತೆರೆಯಲಾಯಿತು . ಸಾವಿರಾರು ಮಂದಿ ಕಾಯುತ್ತಿರುವಾಗಲೇ ಪೊನ್ನಂಬಲಮೇಡದಲ್ಲಿ ಮಕರಜ್ಯೋತಿ ಬೆಳಗಿತು. ಭಕ್ತರು ಮಕರಜ್ಯೋತಿಯನ್ನು ಕಣ್ತುಂಬಿಕೊಂಡರು.

 

ಸೋಮವಾರ ಸಂಜೆ 5 ಗಂಟೆಗೆ ಗರ್ಭಗುಡಿಯ ತೆರೆಯಲಾಯಿತು. ಪಂದಳಂನಿಂದ ಆರಂಭವಾದ ತಿರುವಾಭರಣ ಮೆರವಣಿಗೆಯನ್ನು ದೇವಸ್ವಂ ಅಧಿಕಾರಿಗಳು ಶರಂಕುತ್ತಿಯಲ್ಲಿ ಬರಮಾಡಿಕೊಂಡರು. ಅಯ್ಯಪ್ಪನಿಗೆ ತೊಡುವ ತಿರುವಾಭರಣವನ್ನು ದೇವಸ್ವಂ ಅಧಿಕಾರಿಗಳು ಸ್ವೀಕರಿಸಿದ ನಂತರ ಮೆರವಣಿಗೆಯು ಸನ್ನಿಧಾನಕ್ಕೆ ತೆರಳಿತು. 18 ಮೆಟ್ಟಿಲು ಹತ್ತಿ ಸೋಪಾನಂ ತಲುಪಿದ ಬಳಿಕ ತಂತ್ರಿ ಮತ್ತು ಮೇಲ್ಶಾಂತಿ ಸೇರಿ ತಿರುವಾಭರಣವನ್ನು ಸ್ವೀಕರಿಸಿ ಅಯ್ಯಪ್ಪ ಮೂರ್ತಿಗೆ ತೊಡಿಸುತ್ತಾರೆ. ನಂತರ ದೀಪಾರಾಧನೆ ನಡೆಯಿತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments