Tuesday, June 24, 2025
26.6 C
Bengaluru
Google search engine
LIVE
ಮನೆರಾಜಕೀಯಸಿಎಂ ಸಿದ್ದು ತವರಲ್ಲಿ ಅಮಿತ್​​ ಶಾ ಅಬ್ಬರದ ಭಾಷಣ

ಸಿಎಂ ಸಿದ್ದು ತವರಲ್ಲಿ ಅಮಿತ್​​ ಶಾ ಅಬ್ಬರದ ಭಾಷಣ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್​ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಿರುವ ಶಿಲ್ಪಿ ಅರುಣ್​ ಯೋಗಿರಾಜ್​ ಅವರನ್ನು ಸನ್ಮಾಸಿದರು.

ನಂತರ ಅಮಿತ್​ ಶಾ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶಾದ್ಯಂತ ಸಾಂಸ್ಕೃತಿ ಪುನರ್​​ ಪ್ರತಿಷ್ಠಾಪನೆಯಾಗುತ್ತಿದೆ. ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಕಾಶಿ ಉಜ್ಜಯಿನಿ ನದ್ರಿನಾಥ್​​ ಕಾರಿಡಾರ್​​ ಅಭಿವೃದ್ದಿ ಆಗಿವೆ. ದೇಶದಲ್ಲಿ ಆಯುರ್ವೇದ, ಯೋಗ ಭಾಷೆ  ಸಂಸ್ಕೃತಿ ಪುನರ್​​ ಸ್ಥಾಪನೆ ಆಗುತ್ತಿದೆ. ಸುತ್ತೂರು ಮಠವೂ ಅಯೋಧ್ಯೆಯಲ್ಇ ಅತಿಥಿ ಗೃಹ ನಿರ್ಮಿಸುತ್ತಿದೆ ಎಂದಿದ್ದಾರೆ.

ಸುತ್ತೂರು  ಸ್ವಾಮೀಜಿ ಅವರಿಗೆ ಪ್ರಣಾಮ ಸಲ್ಲಿಸುತ್ತೇನೆ. ಸುತ್ತೂರು ಮಠದ 24 ಪೀಠಾಧ್ಯಕ್ಷರನ್ನು ಸ್ಮರಿಸುತ್ತೇನೆ. ಕರ್ನಾಟಕದ ಈ ಪವಿತ್ರ ನೆಲದಲ್ಲಿ ನಿಂತು ಬಸವಣ್ಣನವರನ್ನು ನೆನೆಯುತ್ತೇನೆ. ಬಸವಣ್ಣ ಅವರು ಒಂದು ವರ್ಗಕ್ಕೆ ಸೀಮಿತವಾಗಿರದೆ ದೇಶದ ಕೋಟಿ ಕೋಟಿ ಜನರಿಗೆ ಭಕ್ತಿ ಭಾವ ತುಂಬಿದವರಾಗಿದ್ದಾರೆ ಅವರನ್ನು ಕೂಡ ನಾನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೂತ್ತೇನೆ ಎಂದಿದ್ದಾರೆ.

ಸುತ್ತೂರು ಮಠಾಧಿಶರು ಎಲ್ಲರೂ ನಿಸ್ವಾರ್ಥವಾದ ಸೇವೆಯನ್ನು ಸಲ್ಲಲಿಸಿದ್ದಾರೆ. ಅನ್ನ ಅಕ್ಷರ ದಾಸೋಹ ನೀಡುತ್ತಿದೆ. ಲಕ್ಷಾಂತರ ಜನರಿಗೆ ಬೆಳಕನ್ನು ಚೆಲ್ಲುವ ಕೆಲಸ ಮಾಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಅವರ ಸೇವೆಯನ್ನು ಗುರುತಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments