ರಾಜ್ಯಸುದ್ದಿ

ಸಿಎಂ ತವರು ಜಿಲ್ಲೆಯಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್!

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು ಪೊಲೀಸರು 2 ತಾಸು ಮಾತ್ರ ಅನುಮತಿ ಕೊಟ್ಟಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ತವರಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಹೆಜ್ಜೆ ಹೆಜ್ಜೆಗೂ ಅಡ್ಡಿ ಉಂಟಾಗುತ್ತಿದೆ ಎನ್ನಲಾಗುತ್ತಿದೆ.

ರಂಗರಾವ್ ಅಂಡ ಸನ್ಸ್‌ನಿಂದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ‘ಪರಂಪರಾ’ ಹೆಸರಿನಲ್ಲಿ 111 ಅಡಿ ಉದ್ದದ ಅಗರಬತ್ತಿ ಹಚ್ಚಲು ಸಿದ್ಧತೆ ಮಾಡಲಾಗಿದೆ. ಈ 111 ಅಡಿ ಉದ್ದದ ಅಗರಬತ್ತಿ 24 ದಿನ ಉರಿಯುತ್ತದೆ. ಹೀಗಾಗಿ ಆಯೋಜಕರು 24 ದಿನ ಇಡಲು ಅನುಮತಿ ಕೇಳಿದ್ದರು. ಆದರೆ, ಪೊಲೀಸರು ಈ ಅಗರಬತ್ತಿ ಇಡಲು ಕೇವಲ 2 ತಾಸು ಅವಕಾಶ ನೀಡಿದ್ದಾರೆ. ಎರಡು ತಾಸಿನ ಒಳಗೆ ಅಗರಬತ್ತಿಯನ್ನು ಅಲ್ಲಿಂದ ತೆಗೆಯಲು ಸೂಚಿಸಿದ್ದಾರೆ.

ಇದಲ್ಲದೇ ನಗರದ ಅಶೋಕ ರಸ್ತೆಯಲ್ಲಿ ನಡೆಯಬೇಕಿದ್ದ ಲಕ್ಷ‌ ದೀಪೋತ್ಸವಕ್ಕೆ ನೀಡಿದ್ದ ಅನುಮತಿ ಕೊನೆ ಕ್ಷಣದಲ್ಲಿ ರದ್ದು ಮಾಡಲಾಗಿದೆ. ಜ 22 ರಂದು ಲಕ್ಷ ದೀಪೋತ್ಸವಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಆದರೆ ಅನುಮತಿ ರದ್ದುಪಡಿಸಿದ ಪೊಲೀಸ್ ಹಿಂಬರಹ ನೀಡಿದ್ದಾರೆ.ಪೊಲೀಸರ ಅನುಮತಿ‌ ನಿರಾಕರಣೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪೊಲೀಸರಿಂದ ಅನುಮತಿ ಸಹಾ ಪಡೆಯಲಾಗಿತ್ತು. ಇದೀಗ ಹೆಚ್ಚು ವಾಹನ ಸಂಚಾರ ಜನ ಸಂದಣಿ ಕಾರಣ ನೀಡಿ ಅನುಮತಿ ರದ್ದು ಮಾಡಲಾಗಿದೆ. ಇಡೀ ಜಿಲ್ಲೆಯಲ್ಲಿ ರಾಮನಾಮ ಸ್ಮರಣೆ ಬಹಳ ಜೋರಾಗಿದೆ.

Comments (0)

Your email address will not be published. Required fields are marked *

Back to top button