Wednesday, August 20, 2025
20.6 C
Bengaluru
Google search engine
LIVE
ಮನೆಸುದ್ದಿಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು ; ಪತ್ನಿ ಜೊತೆ ವೀಡಿಯೋ ಕಾಲ್​​ನಲ್ಲಿ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರಿನ ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.

ರೈಲ್ವೆ ಹಳಿ ಪಕ್ಕದಲ್ಲಿ ನಡೆದುಕೊಂಡು ಬೆಳಿಗ್ಗೆ ಪತ್ನಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದನು. ಈ ಸಂದರ್ಭದಲ್ಲಿ ಮಿಸ್ ಆಗಿ ರೈಲ್ವೆ ಹಳಿಯಲ್ಲಿ ನಡೆಯುತ್ತಿದ್ದನು. ದುರದೃಷ್ಟವಶಾತ್ ಇದೇ ವೇಳೆಗೆ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. ಘಟನೆ ಸಂಭಂದ ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments