Tuesday, January 27, 2026
24 C
Bengaluru
Google search engine
LIVE
ಮನೆಸುದ್ದಿಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು ; ಪತ್ನಿ ಜೊತೆ ವೀಡಿಯೋ ಕಾಲ್​​ನಲ್ಲಿ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರಿನ ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.

ರೈಲ್ವೆ ಹಳಿ ಪಕ್ಕದಲ್ಲಿ ನಡೆದುಕೊಂಡು ಬೆಳಿಗ್ಗೆ ಪತ್ನಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದನು. ಈ ಸಂದರ್ಭದಲ್ಲಿ ಮಿಸ್ ಆಗಿ ರೈಲ್ವೆ ಹಳಿಯಲ್ಲಿ ನಡೆಯುತ್ತಿದ್ದನು. ದುರದೃಷ್ಟವಶಾತ್ ಇದೇ ವೇಳೆಗೆ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. ಘಟನೆ ಸಂಭಂದ ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments