Tuesday, June 24, 2025
25.9 C
Bengaluru
Google search engine
LIVE
ಮನೆರಾಜಕೀಯರಾಹುಲ್​ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ; ಕಾರಿನ ಹಿಂಬದಿಯ ಗಾಜು ಜಖಂ

ರಾಹುಲ್​ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ; ಕಾರಿನ ಹಿಂಬದಿಯ ಗಾಜು ಜಖಂ

ಪಟ್ನಾ : ಬಿಹಾರದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಭಾರತ್​ ಜೋಡೋ ನ್ಯಾಯ್​ ಯಾತ್ರೆ ನಡೆಯುತ್ತಿದೆ. ಈ ವೇಳೆ ರಾಹುಲ್​ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ ಅವರು ಹೇಳಿದ್ದಾರೆ.

 

ಬಂಗಾಳ ಬಿಹಾರ ಗಡಿಯ ಬಳಿ ಘಟನೆ ನಡೆದಿದೆ. ಯಾರೋ ರಾಹುಲ್​ ಗಾಂಧಿ ಅವರ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಕಾರಿನ ಹಿಂಬದಿಯ ಗಾಜು ಜಖಂಗೊಂಡಿದೆ. ಇನ್ನು ರಾಹುಲ್​ ಅವರ ಭಾರತ್​​​ ಜೋಡೋ ನ್ಯಾಯ್​ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಗ್ಗೆ ರಾಹುಲ್​ ಬಿಹಾರ ಜಿಲ್ಲೆಯಲ್ಲಿ ರೋಡ್​ ಶೋ ನಡೆಸಿದ್ದಾರೆ.

ಮಧ್ಯಾಹ್ನ ಮಾಲ್ಡಾ ಮೂಲಕ ಪಶ್ಚಿಮ ಬಂಗಾಳ ತಲುಪುವ ನಿರೀಕ್ಷೆ ಇತ್ತು. ಆದರೆ ಅವರ ಕಾರು ಜಖಂಗೊಂಡ ಕಾರಣ ಯಾತ್ರೆ ಸಮಯಕ್ಕೆ ಸರಿಯಾಗಿ ಪಶ್ಚಿಮ ಬಂಗಾಳಕ್ಕೆ ತಲುಪಲು ಸಾಧ್ಯವಾಗಿಲ್ಲ ಎಂದು ಅಧೀರ್​​ ರಂಜನ್​ ಚೌಧರಿ ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments