Wednesday, April 30, 2025
35.6 C
Bengaluru
LIVE
ಮನೆರಾಜಕೀಯಬಂಡೆ ಒಡೆದಷ್ಟು ಸುಲಭವಲ್ಲ ದೇಶ ಒಡೆಯುವುದು : ಯತ್ನಾಳ್

ಬಂಡೆ ಒಡೆದಷ್ಟು ಸುಲಭವಲ್ಲ ದೇಶ ಒಡೆಯುವುದು : ಯತ್ನಾಳ್

ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್‌ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್‌ ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿ, ಕನಕಪುರದ ಬಂಡೆ ಒಡೆದಷ್ಟು ಸುಲಭ ಅಲ್ಲ ದೇಶ ಒಡೆಯುವುದು ಎಂದು ಸಂಸದ ಡಿಕೆ ಸುರೇಶ್​ಗೆ ಟಾಂಗ್ ಕೊಟ್ಟಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹುಚ್ಚ ಅನ್ನಬೇಕೊ ಅರೇ ಹುಚ್ಚ ಅನ್ನಬೇಕೋ ರಾಹುಲ್ ಗಾಂಧಿ ಭಾರತ್ ಜೊಡೊ ಯಾತ್ರೆ ಮಾಡುತ್ತಿದ್ದಾನೆ, ಡಿಕೆ ಸುರೇಶ್ ಗೆ ಕನಕಪುರದ ಬಂಡೆ ಒಡೆದಷ್ಟು ಸುಲಭ ಅಲ್ಲ ದೇಶ ಒಡೆಯುವುದು. ನೂರಾರು ಜನರ ತಪ್ಪಸ್ಸಿನಿಂದ ದೇಶ ಕಟ್ಟಿದೆ. ಅದನ್ನು ಒಡೆಯುವುದು ಮೂರ್ಖತನದ ಹೇಳಿಕೆ ಎಂದು ವಾಗ್ದಾಳಿ ನಡೆಸಿದರು.
ಈಗಾಗಲೇ ಕಾಂಗ್ರೆಸ್ ನಾಲ್ಕು ಭಾಗವಾಗಿ ದೇಶ ಒಡೆದಿದೆ, ಪಾಕಿಸ್ತಾನ, ಬಾಂಗ್ಲಾದೇಶ, ಚೀನಾಕ್ಕೆ ಒಂದು ಭಾಗ ನೀಡಿದೆ, ಈಗ ಉತ್ತರ ಭಾರತ, ದಕ್ಷಿಣ ಭಾರತ ಅಂತಾ ಒಡೆಯಲು ನಿಂತಿದ್ದಾರೆ. ರಾಹುಲ್ ಗಾಂಧಿ ಇದಕ್ಕೆ ಉತ್ತರ ಕೊಡಬೇಕು. ಮೋದಿ ಸರ್ಕಾರ ಕನಿಷ್ಠ 10 ಪಟ್ಟು ಅನುದಾನ ನೀಡಿದೆ. ಹಿಂದುಳಿದ ರಾಜ್ಯಗಳಿಗೆ ಅನುದಾನ ಕೊಡಬೇಕು. ನರೇಂದ್ರ ಮೋದಿ ಕಾಲದಲ್ಲಿ ತೊಡೊ ನಡೆಯಲ್ಲ. ಜೊಡೊ ಕೆಲಸ ನಡೆಯುತ್ತದೆ ಎಂದು ಕಿಡಿಕಾರಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments