Wednesday, April 30, 2025
24.6 C
Bengaluru
LIVE
ಮನೆUncategorizedಜಾತ್ಯತೀತ ಅಂತಾರೆ ಅಪ್ಪ-ಅಮ್ಮ ಗೊತ್ತಿಲ್ಲದವರು: ಅನಂತ್​ ಕುಮಾರ್ ಹೆಗಡೆ

ಜಾತ್ಯತೀತ ಅಂತಾರೆ ಅಪ್ಪ-ಅಮ್ಮ ಗೊತ್ತಿಲ್ಲದವರು: ಅನಂತ್​ ಕುಮಾರ್ ಹೆಗಡೆ

ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು ಇದ್ದಾರೆ ಎಂದು ಅನಂತ್​ ಕುಮಾರ್​ ಹೆಗಡೆ ಹೇಳಿದ್ದಾರೆ.

ನನ್ನಮ್ಮ ನನಗೆ ಎದೆ ಹಾಲು ಕುಡಿಸಿದ್ದಾಳೆ, ಬಾಟಲಿ ಹಾಲು ಕುಡಿಸಿಲ್ಲ. ನನ್ನ ರಕ್ತದ ಬಗ್ಗೆ ನನಗೆ ಗೌರವವಿದೆ. ಇದರ ಬಗ್ಗೆ ಯಾರಾದರೂ ಮಾತಾನಾಡಿದರೆ ಹುಷಾರ್​​ ಎಂದು ಬಿಜೆಪಿ ಸಂಸದ ಅನಂತ್​​ಕುಮಾರ್​​ ಹೆಗಡೆ ಎಚ್ಚಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಸಂಸದ ಅನಂತ್​ ಕುಮಾರ್​​ ಹೆಗಡೆ ಹೇಳಿಕೆ ನೀಡಿದ್ದಾರೆ.

ನಮ್ಮ ರಾಮ, ಹಿಂದೂಗಳು, ಹಿರಿಯರ ಬಗ್ಗೆ ಮಾತನಾಡಿದರೆ ಸಹಿಸಲ್ಲ. ಅವರು ಮೈಸೂರು ಗರಡಿಯಲ್ಲಿ ಬೆಳೆದಿದ್ದರೆ. ನಾನು ಕೂಡ ಮೈಸೂರು ಗರಡಿಯಲ್ಲಿಯೇ ಬೆಳೆದವನು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

ನಮ್ಮವರಿಗೆ ಏಕವಚನದಲ್ಲಿ ಮಾತಾಡಿದರೆ ಏನು ಮಾಡಲಿ..? ಯುದ್ಧಭೂಮಿಯಲ್ಲಿ ಶಾಸ್ತ್ರೀಯ ಸಂಗೀತ, ಭರತ ನಾಟ್ಯ ಮಾಡೋಕೆ ಅವಕಾಶವಿಲ್ಲ. ಯುದ್ಧಭೂಮಿಯಲ್ಲಿ ಹೇಗೆ ಮಾತಡಬೇಕೋ ಹಾಗೇ ಮಾತಡಬೇಕು ಅಲ್ಲಿ ಹೋಗಿ ಭರತ ನಾಟ್ಯ ಮಾಡೋಕೆ ಆಗುತ್ತಾ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments