Wednesday, April 30, 2025
32 C
Bengaluru
LIVE
ಮನೆರಾಜಕೀಯಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ : ಕೆ.ಜಿ. ಬೊಪಯ್ಯ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ : ಕೆ.ಜಿ. ಬೊಪಯ್ಯ

ಕೊಡಗು : ವಿಧಾನಸಭಾ ಮಾಜಿ ಸ್ಪೀಕರ್, ವಿರಾಜಪೇಟೆ ಮಾಜಿ ಶಾಸಕರಾದ ಕೆ.ಜಿ. ಬೊಪಯ್ಯ ಫ್ರೀಡಂ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ತಾನು ಯಾವುದೇ ರೀತಿಯ ಪ್ರಯತ್ನ ಪಟ್ಟಿಲ್ಲ ಹಾಗೆ ಬೇಡಿಕೆಯನ್ನು ಕೂಡ ವರಿಷ್ಠರ ಮುಂದೆ ಇಟ್ಟಿಲ್ಲ ಎಂದು ಮಾಜಿ ವಿಧಾನಸಭಾ ಸ್ಪೀಕರ್ ಕೆ.ಜಿ ಬೊಪಯ್ಯನವರು ಸ್ಪಷ್ಟನೆ ನೀಡಿದ್ದಾರೆ.

ಫ್ರೀಡಂ ಟಿವಿ ಗೆ ಮಾಹಿತಿ ನೀಡಿದ ಮಾಜಿ ಸ್ಪೀಕರ್ ಕೆ. ಜಿ. ಬೋಪಯ್ಯ. ಈ ಹಿಂದೆ ಬಂದ ವರದಿಯ ಬಗ್ಗೆ ಮಾತನಾಡಿದ ಅವರು ಪಕ್ಷದ ವರಿಷ್ಠರು ತೀರ್ಮಾನಿಸಿ ಯಾರೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅವರ ಪರವಾಗಿ, ಪಕ್ಷದ ಪರವಾಗಿ ಕ್ಷೇತ್ರದಾದ್ಯಂತ ಓಡಾಡಿ ಮತ ಕೇಳುತ್ತೇವೆ.

ಹೊರತು ತನಗೆ ಟಿಕೆಟ್ ನೀಡುವಂತೆ ಯಾರ ಬಳಿಯೂ ನಾನು ಬೇಡಿಕೆ ಇಟ್ಟಿಲ್ಲ ಹಾಗೆ ಪ್ರಭಾವವನ್ನು ಬೀರಿಲ್ಲ ಎಂದು ಹೇಳಿದ್ದಾರೆ. ಜಿಲ್ಲೆಯ ಜನತೆ ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments