Wednesday, April 30, 2025
35.6 C
Bengaluru
LIVE
ಮನೆರಾಜ್ಯಒಳ ಮೀಸಲಾತಿಯಿಂದ ಅನ್ಯಾಯ ಲಂಬಾಣಿ ಸಂಘದ ಶೇಷಾನಾಯ್ಕ್ ಆಕ್ರೋಶ

ಒಳ ಮೀಸಲಾತಿಯಿಂದ ಅನ್ಯಾಯ ಲಂಬಾಣಿ ಸಂಘದ ಶೇಷಾನಾಯ್ಕ್ ಆಕ್ರೋಶ

ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ ಪರಿಚ್ಛೇದ 3ರ ಶೆಡ್ಯೂಲ್​ ಅನುಮೋದನೆಗೋಸ್ಕರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, ಇದರಿಂದ ಲಂಬಾಣಿ, ಭೋವಿ , ಕೊರಚ, ಕೊರಮ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಶಿರಾ ತಾಲೂಕು ಬಂಜಾರ ( ಲಂಬಾಣಿ) ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್​​ ಶೇಚಾನಾಯ್ಕ ತಿಳಿಸಿದರು.

ನಗರದ ಸೇವಾಲಾಲ್​ ಭವನದಲ್ಲಿ ಶಿರಾತಾಲೂಕು ಬಂಜಾರ ( ಲಂಬಾಣಿ ) ಕ್ಷೇಮಾಭಿವೃದ್ಧಿ ಸಂಘದಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಒಳಮೀಸಲಾತಿಯನ್ನು ಮಾಡಲೇಬಾರದು ಎಂದು ಸುಪ್ರೀಂ ಕೋರ್ಟಿನ ನಿರ್ದೇಶನವಿದೆ. ಒಳಮೀಸಲಾತಿ ಜಾರಿಗೊಳಿಸಲು ಸಂವಿಧಾನದಲ್ಲೂ ಅವಕಾಶವಿಲ್ಲ ಎಂದು ಈಗಾಗಲೇ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. ಈ ವಿಷಯವಾಗಿ, ಸಂಸತ್​​ ನಲ್ಲಿ ಬೇರೆ ರಾಜ್ಯದ ಸದಸ್ಯರು ಪ್ರಶ್ನಿಸಿದ ಸಂದರ್ಭದಲ್ಲಿ ಸಂಸತ್ತಿನಲ್ಲಿಯೇ ಉತ್ತರ ಕೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಓಳಮೀಸಲಾತಿ ಜಾರಿ ಮಾಡುವುದಕ್ಕೆ ಅವಕಾಶವಿಲ್ಲ, ಮಾಡುವುದಾದರೆ ಸಂವಿಧಾನ ತಿದ್ದುಪಡಿ ಮಾಡಬೇಕು ಎಂಬ ಮಾತನ್ನು ಹೇಳಿದ್ದಾರೆ. ಇಷ್ಟೆಲ್ಲಾ ಆದರೂ ರಾಜ್ಯ ಕಾಂಗ್ರೆಸ್​ ಸರ್ಕಾರದ ಸಚಿವ ಸಂಪುಟದಲ್ಲಿ ಮಂಡನೆ ಮಾಡಿ ಲಂಬಾಣಿ ಸಮಾಜದವರಿಗೆ ಅನ್ಯಾಯ ಮಾಡಿದ್ದಾರೆ. ಕಳೆದ ವಿಧಾನಸಭಾ ಸುನಾವಣೆಗೂ ಮುನ್ನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಅನುಮೋದನೆ ಮಾಡಿದ ಫಲದಿಂದ ವಿಧಾನಸಭಅ ಚುನಾವಣೆಯಲ್ಲಿ ಸೋಲು ಅನುಭವಿಸಿದೆ, ಇದೆಲ್ಲಾ ಗಮನದಲ್ಲಿ ಇಟ್ಟುಕೊಂಡು ಈಗಿನ ರಾಜ್ಯ ಕಾಂಗ್ರೆಸ್​ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳಬೇಕು ಎಂದರು.  ಶಿರಾ ತಾಲೂಕು ಬಂಜಾರ (ಲಂಬಾಣಿ) ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ  ಆರ್​​. ಲಕ್ಷ್ಮಣ್​ ನಾಯ್ಕ್​, ಸದಸ್ಯರಾದ ನಾನಾ ನಾಯಕ್​, ಸರೋಜ ಬಾಯಿ, ಮೇಘಾ ನಾಯ್ಕ್​​, ಆನಂದ್​ ಕುಮಾರ್​​, ಸತೀಶ್​, ಪರಶುರಾಮ್​ ನಾಯ್ಕ್​. ಕುಮಾರ್​ನಾಯ್ಕ, ಭೀಮಾ ನಾಯ್ಕ, ಮಹೇಶ್​, ಢಾಕ್ಕಾನಾಯ್ಕ. ರಾಮಕೃಷ್ಣ, ಪ್ರವೀಣ್​, ಕೇಶವ್​, ಮೀಠ್ಯಾನಾಯ್ಕ, ದೇವ್ಲಾನಾಯ್ಕ ಹಾಜರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments