
ದಿನೇ ದಿನೇ ಮಂಡ್ಯ ಚುನಾವಣಾ ಕಣ ರಂಗೇರುತ್ತಿದೆ. ಮಂಡ್ಯ ಕ್ಷೇತ್ರಾದ್ಯಂತ ಸಂಚಲ ಮೂಡಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 1ರಂದು ಸ್ಟಾರ್ ಚಂದ್ರು ಅವರು ಪಕ್ಷದ ಮುಖಂಡರು ಹಾಗು ಅಪಾರ ಕಾರ್ಯಕರ್ತರೊಂದಿಗೆ ಬೆಳಗ್ಗೆ 9.30 ರ ಸುಮಾರಿಗೆ ಶ್ರೀ ಕಾಳಿಕಾಂಬಾ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಏಪ್ರಿಲ್ 1 ರಂದು ನಾಮಪತ್ರ ಸಲ್ಲಿಕೆ ನಂತರ ಪಕ್ಷದ ಸ್ಥಾನ ಗೆಲ್ಲುವ ತಂತ್ರಗಳ ಕುರಿತು ವಿವರವಾದ ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಕೈ ಅಭ್ಯರ್ಥಿ ಗೆಲುವಿಗೆ ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಉದಯ್, ರವಿ, ರಮೇಶ್ ಬಂಡಿಸಿದ್ದೇಗೌಡ, MLC ಗೂಳಿಗೌಡರ ತಂಡ ಕಾರ್ಯತಂತ್ರ ರೂಪಿಸುತ್ತಿದೆ.




