Wednesday, April 30, 2025
24 C
Bengaluru
LIVE
ಮನೆರಾಜಕೀಯಕಾಂಗ್ರೆಸ್​ ಸರ್ಕಾರ ಪತನದ ಅನ್ನೋದು ಬಿಜೆಪಿಯವರ ಹಗಲು ಗನಸು : ಡಾ.ಜಿ ಪರಮೇಶ್ವರ್

ಕಾಂಗ್ರೆಸ್​ ಸರ್ಕಾರ ಪತನದ ಅನ್ನೋದು ಬಿಜೆಪಿಯವರ ಹಗಲು ಗನಸು : ಡಾ.ಜಿ ಪರಮೇಶ್ವರ್

ತುಮಕೂರು : ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್​ ಪಕ್ಷ ಪತನವಾಗಿದೆ. ಎಂಬುದು ಬಿಜೆಪಿಯ ಹಗಲು ಗನಸು. ಇದಕ್ಕೆ ಜೆಡಿಎಸ್​​ ಕೂಡ ಹೊರತಾಗಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್​ ಹೇಳಿದರು.

ತುಮಕೂರಿನಲ್ಲಿ ಗಣರಾಜ್ಯೋತ್ಸವ ಆಚರಣೆ ಬಳಿಕ ಮಾತನಾಡಿದ ಅವರು, ಜಗದೀಶ್​ ಶೆಟ್ಟರ್​​ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಆಗಲಿ, ನಾವು ನಮ್ಮ ಪಕ್ಷಕ್ಕೆ ಬರುವಾಗ ಅದ್ದೂರಿಯಾಗಿ ಸ್ವಾಗತ ಮಾಡಿದ್ದೆವು. ನನ್ನನ್ನು ಸರಿಯಾಗಿ ಬಿಜೆಪಿಯವ್ರು  ನಡೆಸಿಕೊಂಡಿಲ್ಲ ಅಂತೆಲ್ಲಾ ಹೇಳಿ ಪಕ್ಷಕ್ಕೆ ಬಂದಿದ್ದರು. ಪಕ್ಷಕ್ಕೆ ಅವರು ಬಂದ ಬಳಿಕ ಕಾಂಗ್ರೆಸ್​​ನಲ್ಲಿ ಅವರಿಗೆ ಗೌರವಯುತವಾಗಿ ನಡೆಸಿಕೊಂಡಿದ್ದೇವು. ವಿಧಾನಸಣಾ ಚುನಾವಣೆಯಲ್ಲಿ ಅವರಿಗೆ ಅವಕಾಶ ಕಲ್ಪಿಸಿದ್ದೆವು. ಮುಖ್ಯಮಂತ್ರಿಯಾಗಿದ್ದವರು ಸೋಲಬಾರರು ಆದರೂ ಸೋತರು. ಇದು ಅವರಿಗೆ ಜನ ಬೆಂಬಲ ಇಲ್ಲ ಅಂತಾ ಗಿತ್ತಾಗುತ್ತದೆ. ಆದರೂ ಅವರು ಸಿಎಂ ಆಗಿದ್ದವರು ಎಂದು ವಿಧಾನಪರಿಷತ್​ ಸದಸ್ಯರನ್ನಾಗಿ ಮಾಡಿದ್ದವು. ಆದ್ರೆ ಬಿಜೆಪಿಯನ್ನು ಬೈದವರು ಮತ್ತೆ ವಾಪಸ್​ ಹೋಗಿದ್ದಾರೆ ಎಂದರೆ ಯಾಕೆ ಹೋಗಿದ್ದಾರೆ ಎಂದು ಗೊತ್ತಿಲ್ಲ ಎಂದರು.

ಜಗದೀಶ್​ ಶೆಟ್ಟರ್​ ಹೋಗಿರುವುದಕ್ಕೆ ಟೀಕೆ ಟಿಪ್ಪಣಿ ಮಾಡಲ್ಲ. ನಮಗೆ ಲಾಭನೂ ಇಲ್ಲ. ನಷ್ಟನೂ ಇಲ್ಲ. ಅವರನ್ನು ಲಾಭ ಆಗುತ್ತದೆ ಅಂತಾನೆ ಕರೆಸಿಕೊಂಡಿದ್ದೆವು. ಆದ್ರೆ ಸೋತರಲ್ಲ ಆದರಿಂದ ನಮಗೆ ನಷ್ಟ ಆಯಿತಲ್ಲ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments