ಬೆಂಗಳೂರು : ಬಿಜೆಪಿಗೆ ಅಧಿಕೃತವಾಗಿ ಸಂಸದ ಕರಡಿ ಸಂಗಣ್ಣ ಗುಡ್ ಬೈ ಹೇಳಿರುವುದು ಚುನಾವಣಾ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಆಘಾತ.
ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಗಣ್ಣ ಕರಡಿ ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಸಂಗಣ್ಣ ಬೇಸರಗೊಂಡು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೊಪ್ಪಳ ಲೋಕಸಭಾಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಬಿಜೆಪಿ ಸಂಸದರಾಗಿದ್ದರು.