ಲೋಕಸಭೆ ಚುನಾವಣೆ ಸಮೀಪದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ ನೀಡಿದ ರಾಜೀನಾಮೆಯನ್ನು ಸಭಾಪತಿ ಬಸವರಾಜಹೊರಟ್ಟಿ ಅಂಗೀಕರಿಸಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್ ತೇಜಸ್ವಿನಿ ಗೌಡ ಬೇಡಿಕೆಗೆ ಮಣೆ ಹಾಕಿರಲಿಲ್ಲ. ಇದರಿಂದ ತೇಜಸ್ವಿನಿ ಗೌಡ ಬೇಸರವಾಗಿದ್ದರು ಹಾಗಾಗಿ ಇದೀಗ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಮುಂದೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.