Top Newsರಾಜಕೀಯಸುದ್ದಿ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.

ಮಾನವತವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ  ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್​ರವರಿಗೆ ಸಲ್ಲುತ್ತದೆ.

Comments (0)

Your email address will not be published. Required fields are marked *

Back to top button