ಸಿನಿಮಾಸುದ್ದಿ

ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನೈ ಸೂಪರ್​ ಕಿಂಗ್​ ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಇದೆಲ್ಲದರ ನಡುವೆ ಗಜಪಡೆ ಪೋಸ್ಟ್ ಟ್ರೆಂಡ್ ಆಗುತ್ತಿದೆ. ಟೂರ್ನಿ ಆರಂಭದಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ತೋರಿತ್ತು. ಹಾಗಾಗಿ ಭಾರೀ ಟೀಕೆ, ಟ್ರೋಲ್ ಎದುರಿಸುವಂತಾಗಿತ್ತು. ಅಂತಹ ಸಮಯದಲ್ಲೇ ಕಿಡಿಗೇಡಿ ಒಬ್ಬ ಇದಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರು ಎಳೆದು ತಂಡ ಅವಹೇಳಕಾರಿ ಪೋಸ್ಟ್ ಮಾಡಿದ್ದ. ಇದೀಗ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ದೊಡ್ಮನೆಯ ಅದೃಷ್ಟ ದೇವತೆ ಎಂದು ಜನರು ಟ್ವೀಟ್‌ ಮಾಡುತ್ತಿದ್ದಾರೆ.

ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳನಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.

Comments (0)

Your email address will not be published. Required fields are marked *

Back to top button