Tuesday, June 24, 2025
25.9 C
Bengaluru
Google search engine
LIVE
ಮನೆಸುದ್ದಿಹಾವು ಕಚ್ಚಿ ಮಗು ಸಾವು ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಹಾವು ಕಚ್ಚಿ ಮಗು ಸಾವು ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಂಗಳೂರು : ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ನಡೆದಿದೆ.

ಟಿ ಹೊಸಹಳ್ಳಿ ಗ್ರಾಮದ ಅನುಷಾ(7) ಮೃತ ಮಗು. ಇನ್ನು ಕೋಳೂರು ಗ್ರಾಮದ ತೋಟದ ಮನೆಯಲ್ಲಿ ಈ ಕುಟುಂಬ ಕೂಲಿ ಕೆಲಸ ಮಾಡಿಕೊಂಡಿತ್ತು. ಎಂದಿನಂತೆ ತಂದೆ-ತಾಯಿ‌ ತೋಟದಲ್ಲಿ ಕೇಲಸ ಮಾಡುವ ವೇಳೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿದೆ.

ಈ ವೇಳೆ ಮಗು ಅಸ್ವಸ್ಥಗೊಂಡಿದ್ದನ್ನ ಕಂಡ ಕುಟುಂಬಸ್ಥರು ಕೂಡಲೇ ದೊಡ್ಡಬಳ್ಳಾಪುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments