Wednesday, April 30, 2025
34.5 C
Bengaluru
LIVE
ಮನೆಕ್ರೈಂ ಸ್ಟೋರಿSSLCಯಲ್ಲಿ ಪಾಸಾದ ಖುಷಿಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ!

SSLCಯಲ್ಲಿ ಪಾಸಾದ ಖುಷಿಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ!

ಕೊಡಗು : ನಿನ್ನೆ ಎಸ್​ಎಸ್ಎಲ್​ಸಿ ಫಲಿತಾಂಶ ಹೊರ ಬಿದ್ದಿದೆ. ಮಧ್ಯಾಹ್ನದ ವೇಳಗೆ ಅಮ್ಮಾ ನಾನು 10ನೇ ತರಗತಿ ಪಾಸ್ ಆದೆ ಅಂತ ಮನೆಗೆ ಬಂದು ಪೋಷಕರ ಬಳಿ ಹೇಳಿಕೊಂಡಿದ್ದ ಬಾಲಕಿ ಸಂಜೆ ಹೊತ್ತಿಗೆ ಕೊಲೆಯಾಗಿದ್ದಾಳೆ. ರುಂಡ ಒಂದು ಕಡೆ. ಮುಂಡ ಒಂದು ಕಡೆ. ಬಿಸಾಡಿ ಹೋಗಿದ್ದ ದುಷ್ಕರ್ಮಿ ವಿದ್ಯಾರ್ಥಿನಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇಂಥಹ ಭೀಕರ ಘಟನೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬಿ ಗ್ರಾಮದಲ್ಲಿ ನಡೆದಿದೆ.

 

 

ಅಷ್ಟಕ್ಕೂ ಕೊಲೆಗೆ ಕಾರಣವೇನು ಗೊತ್ತಾ?

ಎಸ್‌ಎಸ್‌ಎಲ್‌ಸಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬಿ ಗ್ರಾಮದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೀನಾಗೆ ವಿವಾಹ ಮಾಡುವುದಕ್ಕೆ ಪೋಷಕರು ಮುಂದಾಗಿದ್ದು, ನಿನ್ನೆ ನಿಶ್ಚಿತಾರ್ಥ ನಿಶ್ಚಯ ಮಾಡಿದ್ದರು. ಅಪ್ರಾಪ್ತ ಬಾಲಕಿಯನ್ನ ವಿವಾಹ ಮಾಡುವ ಬಗ್ಗೆ ಗ್ರಾಮಸ್ಥರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆ 34 ವರ್ಷದ ಹಮ್ಮಿಯಾಲ ಗ್ರಾಮದ ಮೊಣ್ಣಂಡ ಪ್ರಕಾಶ್ ಎಂಬಾತನೊಂದಿಗೆ ಎಂಗೇಜ್ಮೆಂಟ್ ಮಾಡುವ ವೇಳೆ ಸೋಮವಾರಪೇಟೆ ಪೊಲೀಸರು ತಡೆಯೊಡ್ಡಿ ಕ್ಯಾನ್ಸಲ್​ ಮಾಡಿಸಿದ್ದರು.

ಬಾಲ್ಯವಿವಾಹ ಅಪರಾಧ ಈ ಹಿನ್ನೆಲೆ ಬಾಲಕಿ ವಯಸ್ಕಳಾಗುವವರೆಗೆ ಮದುವೆ ಮಾಡುವಂತಿಲ್ಲ, ವೇಟ್ ಮಾಡಿ ಎಂದು ನಿಶ್ಚಿತಾರ್ಥ ನಿಲ್ಲಿಸಿದ್ದರು. ಆದರೆ ಅಷ್ಟರಲ್ಲಿ ಸಂಜೆ ವೇಳೆಗೆ ಬಂದ ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಮೊಣ್ಣಂಡ ಪ್ರಕಾಶ್ ಬಾಲಕಿ ಮನೆಯವರ ಜೊತೆ ಜಗಳ ಮಾಡಿದ್ದಾನೆ. ಬಳಿಕ ಆಕೆಯನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಬರ್ಬರವಾಗಿ ತಲೆ ಕಡಿದಿದ್ದಾನೆ. ಮೀನಾಳ ತಲೆ ಕತ್ತರಿಸಿ ದೇಹವನ್ನ ಬೇರೆ ಕಡೆ ಬಿಸಾಡಿ ಹೋಗಿದ್ದಾನೆ. ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಸೋಮವಾರಪೇಟೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಒಟ್ಟಾರೆ, ಸೂರ್ಲಬ್ಬಿ ಶಾಲೆಯಲ್ಲಿ ಕಲಿಯುತ್ತಿದ್ದಳು ಏಕೈಕ ವಿದ್ಯಾರ್ಥಿನಿ ಎಸ್​ಎಸ್​ಎಲ್​ಸಿಯಲ್ಲಿ ಪಾಸ್​ ಆಗಿದ್ದಾಳೆ ಎಂಬ ಖುಷಿ ಮಾಸೋ ಮುನ್ನವೇ ವಿದ್ಯಾರ್ಥಿನಿ ಮೀನಾ ನೆತ್ತರಕೋಡಿ ಹರಿದಿದೆ. ಈ ಭೀಕರ ಘಟನೆ ಕೊಡಗಿನ ಜನರನ್ನ ಬೆಚ್ಚಿ ಬೀಳಿಸಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments