Wednesday, April 30, 2025
35.6 C
Bengaluru
LIVE
ಮನೆಸುದ್ದಿಪ್ರಜ್ವಲ್ ಬಂದಾಯ್ತು ಈಗ ಭವಾನಿ ಎಲ್ಲಿ? 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ರೇವಣ್ಣ ಪತ್ನಿ

ಪ್ರಜ್ವಲ್ ಬಂದಾಯ್ತು ಈಗ ಭವಾನಿ ಎಲ್ಲಿ? 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದ ರೇವಣ್ಣ ಪತ್ನಿ

ಹಾಸನ : ಅಶ್ಲೀಲ ವಿಡಿಯೋ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಕುಟುಂಬದ ಸದಸ್ಯರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಮಧ್ಯೆ, ಪ್ರಮುಖ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ಬಂದು ಬೆಂಗಳೂರಿನಲ್ಲಿ ಎಸ್​​ಐಟಿ ವಶವಾಗಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಿಡ್ನ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಭವಾನಿ ರೇವಣ್ಣ ಕಳೆದ 15 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಂಡಿರುವುಸು ಎಸ್​ಐಟಿ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

ಈ ಮಧ್ಯೆ, ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿದೆ. ಆದರೆ, ಈ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಮೇ 4 ರಂದು ಸಂತ್ರಸ್ತೆಯರ ಸ್ಥಳ ಮಹಜರಿನ ವೇಳೆ ಹೊಳೆನರಸೀಪುರ ಮನೆಯಲ್ಲಿ ಭವಾನಿ ಹಾಜರಿದ್ದರು. ಆ ನಂತರ ಮೇ 6 ರಂದು ಹೊಳೆನರಸೀಪುರದ ಮನೆಯಲ್ಲಿ ಜಿಲ್ಲೆಯ ಜೆಡಿಎಸ್ ಶಾಸಕರು ಹಾಗೂ ಮಾಜಿ ಶಾಸಕರು ಭವಾನಿಯನ್ನು ಬೇಟಿಯಾಗಿದ್ದರು. ಶಾಸಕರನ್ನು ಬೇಟಿಯಾದ ನಂತರ ಹೊಳೆನರಸೀಪುರ ಮನೆಯಿಂದ ಭವಾನಿ ರೇವಣ್ಣ ಹೊರ ಹೋಗಿದ್ದರು.

ಆ ನಂತರ, ಅಂದರೆ ಮೇ 8 ರಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಜೈಲುಪಾಲಾಗಿದ್ದ ಪತಿ ರೇವಣ್ಣರನ್ನು ಬೇಟಿಯಾಗಲೂ ಬಂದಿಲ್ಲ. ಆ ಬಳಿಕ ರೇವಣ್ಣ ಜೈಲಿನಿಂದ ಬಿಡುಗಡೆ ಆದರೂ ಅವರನ್ನು ಬೇಟಿಯಾಗಲು ಭವಾನಿ ಬಂದಿಲ್ಲ. ಸದ್ಯ ಅವರು ನಿಗೂಢ ಸ್ಥಳದಲ್ಲಿ ಇದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ, ಭವಾನಿ ರೇವಣ್ಣ ಎಲ್ಲಿದ್ದಾರೆಂಬ ಬಗ್ಗೆ ಮಾಹಿತಿ ಕಲೆ ಹಾಕಲು ಎಸ್​ಐಟಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಇಂದು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ಭವಾನಿ ರೇವಣ್ಣ ಬಂಧನ ಸಾದ್ಯತೆ ಇದೆ. ಹೀಗಾಗಿಯೇ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಭವಾನಿಗೆ ಎಸ್​ಐಟಿ ಮೊದಲ‌ ನೊಟೀಸ್ ನೀಡಿದ್ದು, ಜೂನ್ 1 ರಂದು ಖುದ್ದು ಮನೆಯಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments