ಹುಬ್ಬಳ್ಳಿ: ನೇಹಾ ಮತ್ತು ಅಂಜಲಿ ಕೊಲೆ ನಡೆದ ಬಳಿಕ ವಾಣಿಜ್ಯ ನಗರಿ ಹುಬ್ಬಳ್ಳಿ ಬೆಚ್ಚಿ ಬಿದ್ದಿದೆ. ಎರಡು ಕೊಲೆಗಳ ನಡೆದ ಬಳಿಕ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದೆಯಾ ಅನ್ನೋ ಪ್ರಶ್ನೆ ಮೂಡಿತ್ತು. ಅಂಜಲಿ ಕೊಲೆಯಾದ ಬಳಿಕ ನಾಲ್ಕು ಪೊಲೀಸರ ಅಮಾನತ್ತು ಆಗಿದ್ದಾರೆ. ಇಷ್ಟಾದರೂ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಸರಿದಾರಿಗೆ ಬರೋ ತರಹ ಕಾಣುತ್ತಿಲ್ಲ. ಏಕೆಂದರೆ ಹಾಡು ಹಗಲೆ ಓರ್ವ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ.
ಇನ್ನು ಎಲಿಜಿಬತ್ ಮಹಿಳೆ ಹಲ್ಲೆ ಮಾಡಿದವರಲ್ಲಿ ಮಾರುತಿ ನಗರದ ನಿವಾಸಿ ರಾಜೇಶ್ವರಿ ಎಂಬವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ಆರೋಪಿಯನ್ನ ಇನ್ನೂ ಪತ್ತೆ ಮಾಡಿಲ್ಲ. ಯಾಕೆ ಎಂಬುದು ಎಲ್ಲರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಅವಮಾನ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿರೋದಾಗಿ ದೂರಿನಲ್ಲಿ ಉಲ್ಲೇಖಿಸಿಲಾಗಿದೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಐಪಿಸಿ 323, 324, 307, 341, 504, ಹಾಗೂ 506 ಅಡಿಯಲ್ಲಿ ಎಂಟು ಜನರ ವಿರುದ್ದ ದೂರು ದಾಖಲಾಗಿದೆ.