ರಾಜ್ಯಸುದ್ದಿ

ಮಳೆ, ಗಾಳಿಗೆ ಪಪ್ಪಾಯ ಬೆಳೆ ನಾಶ – ಲಕ್ಷಾಂತರ ರೂ. ನಷ್ಟ

ವಿಜಯನಗರ : ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕುರುಳಿರುವಂತಹ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ್ದ 5 ಎಕರೆಯಲ್ಲಿ ಪಪ್ಪಾಯಿ ಬೆಳೆ ಬೆಳೆದಿದ್ದರು. ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆ ನೆನ್ನೆ ರಾತ್ರಿಯಲ್ಲಿ ಬಿರುಗಾಳಿ ಸಹಿತ ಮಳೆಯಿಂದಾಗಿ ಪಪ್ಪಾಯಿ ಗಿಡ ನೆಲಕ್ಕುರುಳಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.

ಅಷ್ಟೇ ಅಲ್ಲದೇ ಅದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಹಾಗೂ ಕುಸುಮ ಎನ್ನುವವರ 4 ಎಕರೆ ಪಪ್ಪಾಯಿ ಬೆಳೆ ಹಾನಿಯಾಗಿದ್ದು ಅಪಾರ ಪ್ರಮಾಣದ ನಷ್ಟ ಎದುರಾಗಿರುವಂತಹ ಸಂದರ್ಭ ಎದುರಾಗಿದೆ.

ಇದಕ್ಕೆ ಸಂಬಂಧಪಟ್ಟಂತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಬೆಳೆ ನಷ್ಟಕ್ಕೀಡಾದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

Comments (0)

Your email address will not be published. Required fields are marked *

Back to top button