ಕ್ರೈಂ ಸ್ಟೋರಿಸುದ್ದಿ

ವಾಲ್ಮೀಕಿ ನಿಗಮ ಹಗರಣ: ಸಿಬಿಐನಿಂದ ಐವರು ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರು ಅಧಿಕಾರಿಗಳ ವಿರುದ್ಧ FIR ದಾಖಲಿಸಿದೆ.

ಯೂನಿಯನ್ ಬ್ಯಾಂಕ್‌ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ FIR ದಾಖಲು ಮಾಡಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಈ ಪ್ರಕರಣ ವಿಶೇಷ ತನಿಖಾ ತಂಡ ಸಿಬಿಐಗೆ ವರ್ಗಾವಣೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದ್ದು, ಒಂದು ವೇಳೆ ರಾಜ್ಯ ಸರ್ಕಾರ ತನಿಖೆಯನ್ನು ಎಸ್ಐಟಿಯಿಂದ ವರ್ಗಾವಣೆ ಮಾಡಲು ನಿರಾಕರಿಸಿದ್ದೆ ಆದರೆ, ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ ಇದೆ ಎಂದು ಮೂಲಗಳು ತಿಳಿಸಿವೆ.

Comments (0)

Your email address will not be published. Required fields are marked *

Back to top button