
ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಮುಂದುವರೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ದೇವಾಲ ಸುತ್ತುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ ರಿತಿಯಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಕಲಬುರಗಿಯಲ್ಲಿರುವ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಬೇಟಿ ನೀಡಿದ್ದಾರೆ.

ದರ್ಗಾಗೆ ಭೆಟಿ ನೀಡಿ ದರ್ಶನವನ್ನ ಪಡೆದಿದ್ದಾರೆ. ಸಧ್ಯ, ಕಲಬುರುಗಿಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಅಬ್ಬರ ಜೋರಾಗೇ ಸಾಗ್ತಾ ಇದೆ. ದೊಡ್ಡಮನಿಗೆ ಸಚಿವ ಶರಣಪ್ರಕಾಶ ಪಾಟೀಲ್, ಕೆಕೆಆರ್ ಡಿಬಿ ಅಧ್ಯಕ್ಷ ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ್ ಸೇರಿ ಹಲವಾರು ಸಾತ್ ನೀಡಿದ್ದಾರೆ.




