ಕ್ರೈಂ ಸ್ಟೋರಿರಾಜ್ಯಸುದ್ದಿ

ಕಾವೇರಿ ನದಿಗೆ ಸ್ನಾನಕ್ಕೆ ತೆರಳಿದ ಯುವಕನಿಗೆ ಆಗಿದ್ದೇನು..?

ಕೊಡಗು : ಸ್ನಾನಕ್ಕೆ ತೆರಳಿದ ಪ್ರದೀಪ್​ ಎಂಬ 21 ವರ್ಷದ ಯುವಕ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಸಮೀಪದ ಬಾಳುಗೋಡಿನಲ್ಲಿ ನಡೆದಿದೆ.


ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದಾಗ ಈ ದುರ್ಘಟನೆ ನಡೆದಿದೆ. ಮೃತದೇಹ ಮೀನಿನ ಗಾಣ ಹಾಗೂ ಬಲೆಗಳಿಗೆ ಸಿಲುಕಿ‌ದಂತಹ  ಸ್ಥಿತಿಯಲ್ಲಿ ಗೋಚರವಾಗಿದೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಬೇಟಿ ನೀಡಿ ಪರಿಶೀಲನೆಯನ್ನ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button