Wednesday, April 30, 2025
29.2 C
Bengaluru
LIVE
ಮನೆರಾಜಕೀಯಬರಮುಕ್ತ ನಾಡನ್ನಾಗಿಸು : ವಿಜಯೇಂದ್ರ ಪ್ರಾರ್ಥನೆ

ಬರಮುಕ್ತ ನಾಡನ್ನಾಗಿಸು : ವಿಜಯೇಂದ್ರ ಪ್ರಾರ್ಥನೆ

ಮೈಸೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಮಾಡಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ಹಾಗೆಯೇ ಗೋ ಮಾತೆಗೆ ನೀರುಣಿಸುವ ಮೂಲಕ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಉಂಟಾಗಿರುವ ಹಾಹಾಕಾರವನ್ನು ದೂರವಾಗಿಸಿ ನಾಡಿನ ಜಲ ಸಂಪತ್ತು ವೃದ್ಧಿಸುವಂತೆ ಹಾಗೂ ರೈತ ಬಂಧುಗಳಿಗೆ ಸಾಂಕೇತಿಕವಾಗಿ ನೇಗಿಲು ನೀಡಿ ಗೌರವಿಸುವ ಮೂಲಕ ರಾಜ್ಯವನ್ನು ಬರಮುಕ್ತ ನಾಡನ್ನಾಗಿಸು ಎಂದು ಪ್ರಾರ್ಥನೆ ಸಲ್ಲಿಸಿದರು.

ಚಾಮರಾಜನಗರ ಬಿಜೆಪಿ ಲೋಕಸಭಾ ಅಭ್ಯರ್ಥಿ ಎಸ್.ಬಾಲರಾಜ್, ಮಾಜಿ ಸಚಿವ ಎಸ್.ಎ. ರಾಮದಾಸ್, ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್ ರಘು ಕೌಟಿಲ್ಯ, ಜಿಲ್ಲಾ ಅಧ್ಯಕ್ಷರಾದ ಎಲ್.ನಾಗೇಂದ್ರ, ಸಿ.ಎಸ್.ನಿರಂಜನ್ ಕುಮಾರ್, ಎಲ್.ಆರ್ ಮಹದೇವಸ್ವಾಮಿ, ಶಾಸಕ ಟಿ.ಎಸ್. ಶ್ರೀವತ್ಸ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments