Tuesday, January 27, 2026
24 C
Bengaluru
Google search engine
LIVE
ಮನೆರಾಜಕೀಯವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್‌ಗೆ HDK ಮನವಿ

ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ: ಪ್ರಜ್ವಲ್‌ಗೆ HDK ಮನವಿ

ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್‌ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ ದೇವೇಗೌಡರ ಫ್ಯಾಮಿಲಿ ಗೆ ಸ್ವಲ್ಪ ಡ್ಯಾಮೆಜ್ ಆಗಿರೋದು ಸತ್ಯ. ಪ್ರಜ್ವಲ್ ಎಚ್.ಡಿ. ರೇವಣ್ಣನ ಸಂಪರ್ಕದಲ್ಲೂ ಇಲ್ಲ. ನಾನು ಈಗ ಏನಾದರೂ ವಿದೇಶಕ್ಕೆ ಹೋದರೆ, ಪ್ರಜ್ವಲ್ ರಕ್ಷಣೆಗೆ ಹೋಗಿದ್ದಾರೆ ಅಂತಾ ಇವರು ಸುದ್ದಿ ಹಬ್ಬಿಸಿ ಬಿಡುತ್ತಾರೆ. ಯಾವ ಗ್ರಹಚಾರ ನಮಗೆ’? ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು.

‘ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೇ ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ. ಪ್ರಜ್ವಲ್ ಗೆ ಹೇಳ್ತಿದ್ದಿನಿ, ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕ ಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ’ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು.
ಇದೇ ಸಂದರ್ಭದಲ್ಲಿ ಬೆಳೆ ಹಾನಿಯ ಬಗ್ಗೆ ಮಾತನಾಡಿದ್ದಾರೆ. ‘ ರಾಜ್ಯದ ಹಲವೆಡೆ ಬೆಳೆ ನಾಶವಾಗಿದೆ. ಸರಕಾರ ಹೇಳಿಕೆಗಳಿಗೆ ಮಾತ್ರ ಸಿಮೀತವಾಗಿದೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಆಗುತ್ತಿವೆ. ಸರಕಾರದ ಗಮನಕ್ಕೆ ಈ ವಿಷಯ ಇದೆಯೋ ಇಲ್ಲವೋ ಗೊತ್ತಿಲ್ಲ. ಮದ್ದೂರು, ಗದಗನಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಗಳಿಗೆ ಹೋಗಿ ಸಾಂತ್ವನ ಹೇಳುವ ಕೆಲಸ ಆಗಿಲ್ಲ. ಬಿಜೆಪಿಯನ್ನು ದೂರುವುದಷ್ಟೆ ಕಾಂಗ್ರೆಸ್ ಕೆಲಸ ಆಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಕುಡಿದು ಓರ್ವ ಮೃತಪಟ್ಟಿದ್ದಾನೆ. ನಾಲ್ಕು ಬಾರಿ ಈ ಕ್ಷೇತ್ರ ಪ್ರತಿನಿಧಿಸಿದ್ದ ಸಿದ್ದರಾಮಯ್ಯ ಯಾವ ರೀತಿ ಕೆಲಸ ಮಾಡಿದ್ದಾರೆ ಎಂಬುದು ಇದರಲ್ಲೆ ಗೊತ್ತಾಗುತ್ತಿದೆ. ಮೈಸೂರು ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಏನಿದೆ ಹೇಳಲಿ? ಸಿಎಂ ರಾಜಕೀಯದ ಕೊನೆ ಹಂತದಲ್ಲಿದ್ದಾರೆ ಈಗಲಾದರೂ ಮೈಸೂರು ಜಿಲ್ಲೆ ಅಭಿವೃದ್ಧಿ ಮಾಡಲಿ’ ಎಂದರು.
‘ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕೆ ಮಾಡುವ ನೈತಿಕತೆ ಸಿಎಂಗೆ ಇಲ್ಲ. ವಿರೋಧಿಗಳಿಗೆ ತೊಂದರೆ ಕೊಡುವುದು, ದ್ವೇಷದ ರಾಜಕಾರಣ ಮಾಡುವುದಷ್ಟೆ ಸರಕಾರದ ಕೆಲಸ ಆಗಿದೆ. ಸರ್ಕಾರದ ಪ್ರಯೋಕತ್ವದಲ್ಲಿ ಮೇ 30 ತಾರೀಕು ಹಾಸನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆ ಗೆ ಕರೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳಿಸ್ತಿನಿ. ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಅಂತಾ ಹೇಳಿದ್ದಾರೆ. ನಾನು ಯಾಕೆ ಅವರನ್ನು ನೋಡಿ ಅಸೂಯೆ ಪಡಲಿ. ಮಹಾನುಭಾವರು 1980 ರಲ್ಲೇ ಸಿಡಿ ಫ್ಯಾಕ್ಟರಿ ಓಪನ್ ಮಾಡಿದ್ದಾರೆ. ಅಧಿಕಾರ ಯಾರ ಅಪ್ಪನ ಆಸ್ತಿಯಲ್ಲ. ರಾಜಕೀಯದಲ್ಲಿ ಏಳು ಬೀಳು ಅದು ಭಗವಂತ ಇಚ್ಚೆ. ಇದರಲ್ಲಿ ಅಸೂಯೆ ಯಾಕೆ? ಪ್ರಧಾನಿ ಸ್ಥಾನವನ್ನೇ ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮ್ಮದು. ಎಲ್ಲಾ ಅಧಿಕಾರವನ್ನು ನಾವು ನೋಡಿ ಆಗಿದೆ’ ಎಂದರು.
ನನ್ನ ಬಳಿ ಇರುವ ಪೆನ್ ಡ್ರೈವ್ ನಿಮ್ಮ ಸರಕಾರದ ವರ್ಗಾವಣೆಯ ಭ್ರಷ್ಟಾಚಾರದ್ದು.‌ ಅದನ್ನು ನಾನು ಈಗ ಬಿಟ್ಟರೆ ಅದು ನನ್ನದೇ ಸೃಷ್ಟಿ ಅಂತಾ ಬೇಕಾದರೆ ನೀವು ಹೇಳ್ತಿರ. ಎಸ್ ಐ ಟಿ ಗೆ ಇದುವರೆಗೂ ಕೊಟ್ಟ ಯಾವ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ ಹೇಳಿ? ನನ್ನ ಅವಧಿಯಲ್ಲಿ ಯಾವ ಪ್ರಕರಣವನ್ನು ಎಸ್ ಐ ಟಿ ಗೆ ಕೊಟ್ಟಿರಲಿಲ್ಲ. ಈಗ ಸಿಎಂ ಪೆನ್ ಡ್ರೈವ್ ಬಗ್ಗೆ ಯಾರೂ ಮಾತಾಡಬೇಡಿ ಅಂದಿದ್ದಾರೆ. ಏಕೆಂದರೆ ನಿಮ್ಮ ಬುಡಕ್ಕೆ ಬರ್ತಾ ಇದೆಯಲ್ಲ. ಅದಕ್ಕೆ ಈಗ ಮಾತಾಡಬೇಡಿ ಅಂತಿದ್ದಾರೆ’ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments