Wednesday, January 28, 2026
18.8 C
Bengaluru
Google search engine
LIVE
ಮನೆUncategorizedಪಠ್ಯಪುಸ್ತಕ ತುಂಬಿದ್ದ ಗೋಡೌನ್‌ಗಳ ಮೇಲೆ ದಾಳಿ

ಪಠ್ಯಪುಸ್ತಕ ತುಂಬಿದ್ದ ಗೋಡೌನ್‌ಗಳ ಮೇಲೆ ದಾಳಿ

ಬೆಂಗಳೂರು :  ಶಾಲಾವಾರು ಬೇಡಿಕೆಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನ ಪಠ್ಯಪುಸ್ತಕಗಳನ್ನು ತಾಲ್ಲೂಕು (ಬ್ಲಾಕ್‌) ಹಂತಕ್ಕೆ ಸರಬರಾಜು ಮಾಡಿದ್ದರೂ ಅವುಗಳನ್ನು ಶಾಲೆಗಳಿಗೆ ತಲುಪಿಸದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಕರ್ನಾಟಕ ಪಠ್ಯಪುಸ್ತಕ ಸಂಘ (ಕೆಟಿಬಿಎಸ್‌) ಗುರುವಾರ ವಿವಿಧೆಡೆ ನಡೆಸಿದ ಪರಿಶೀಲನೆ ವೇಳೆ ಕಂಡು ಬಂದಿದೆ.

ಶಾಲೆಗಳು ಆರಂಭವಾಗಿ ತಿಂಗಳಾದರೂ ಪಠ್ಯಪುಸ್ತಕಗಳು ಪೂರ್ಣ ಪ್ರಮಾಣದಲ್ಲಿ ಶಾಲೆಗಳಿಗೆ ತಲುಪದಿರುವ ಬಗ್ಗೆ ‘ಕನ್ನಡಪ್ರಭ’ ಬುಧವಾರ ಪ್ರಕಟಿಸಿದ್ದ ವಿಶೇಷ ವರದಿ ಹಿನ್ನೆಲೆಯಲ್ಲಿ ಎಚ್ಚೆತ್ತ ಕೆಟಿಬಿಎಸ್‌ ಅಧಿಕಾರಿಗಳು ಹೆಬ್ಬಾಳ ಕೆಂಪಾಪುರದ ಕರ್ನಾಟಕ ಪಬ್ಲಿಕ್‌ ಶಾಲೆ, ಹೊಸಕೆರೆ ಹಳ್ಳಿ ಸರ್ಕಾರಿ ಶಾಲೆ ಸೇರಿದಂತೆ ಬೆಂಗಳೂರಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ತಲುಪದೆ ಇರುವುದು ಖಚಿತವಾಗಿದೆ. ತಕ್ಷಣ ಬ್ಲಾಕ್‌ ಹಂತದ ಗೋದಾಮುಗಳಿಗೆ ಭೇಟಿ ನೀಡಿದಾಗ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ ಕಳುಹಿಸದೆ ಧೂಳು ಹಿಡಿಸಿರುವುದು ಬಹಿರಂಗವಾಗಿದೆ.

ನಂತರ ಕೆಟಿಬಿಎಸ್‌ ಅಧಿಕಾರಿಗಳು ಸ್ಥಳೀಯ ಬಿಇಒಗಳು ಹಾಗೂ ಪಠ್ಯಪುಸ್ತಕ ಸರಬರಾಜು ಜವಾಬ್ದಾರಿ ಹೊತ್ತ ಬ್ಲಾಕ್‌ ಹಂತದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೇ ರೀತಿ ನಿರ್ಲಕ್ಷ್ಯ ಮುಂದುವರೆದರೆ ಕರ್ತವ್ಯ ಲೋಪದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು, ತುಮಕೂರು ಸೇರಿದಂತ ಹಲವೆಡೆ ಪುಸ್ತಕಗಳು ತಲುಪದಿರುವ ಬಗ್ಗೆ ದೂರುಗಳು ಬಂದ ವಿವಿಧ ಜಿಲ್ಲೆಯ ಶಾಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಬಿಸಿ ಮುಟ್ಟಿಸಿ ತಕ್ಷಣವೇ ಪಠ್ಯಪುಸ್ತಕ ಶಾಲೆಗಳಿಗೆ ತಲುಪುವಂತೆ ಮಾಡುವಲ್ಲಿ ಕೆಟಿಬಿಎಸ್‌ ಅಧಿಕಾರಿಗಳು ಕ್ರಮ ವಹಿಸಿದ್ದಾರೆ.

ರಾಜ್ಯದ ಪ್ರತಿ ತಾಲ್ಲೂಕು ಹಂತಕ್ಕೆ ಈಗಾಗಲೇ ಶೇ.95ರಿಂದ 99ರಷ್ಟು ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಆದರೆ, ಇನ್ನೂ ಹಲವೆಡೆ ಬ್ಲಾಕ್‌ ಹಂತದಿಂದ ಶಾಲೆಗಳಿಗೆ ಪುಸ್ತಕಗಳು ತಲುಪುವಲ್ಲಿ ನಿರ್ಲಕ್ಷ್ಯ ವಹಿರುವ ಸಾಧ್ಯತೆ ಇರುವುದರಿಂದ ಶುಕ್ರವಾರದಿಂದ ಪ್ರತಿ ಬ್ಲಾಕ್‌ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸ್ಥಳೀಯ ಅಧಿಕಾ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments