Top Newsಉಪ ಚುನಾವಣೆರಾಜ್ಯಸುದ್ದಿ

ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.

ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ . ಇದೀಗ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ಸರ್ಕಾರ, ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಸದ್ಯಕ್ಕೆ ತಡೆ ಹಿಡಿದಿದೆ.

ಬೆಂಗಳೂರು: ಅತಿಯಾದರೆ ಅಮೃತವೂ ವಿಷವಾಗುತ್ತದೆ. ಸದ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ಕಥೆ ಹಾಗೆಯೇ ಆಗಿದೆ. ಒಂದಲ್ಲ ಒಂದು ಕಾರಣದಿಂದ ಒಂದು ನಿಗದಿತ ವರ್ಗವನ್ನು ಓಲೈಸುತ್ತಿರುವ ಕಾಂಗ್ರೆಸ್​ಗೆ ಪದೇ ಪದೇ ವಿಪಕ್ಷಗಳ ಬಾಣ ಬಂದು ಬಡಿಯುತ್ತಿದೆ. ಹೀಗಾಗಿ ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ನಿರ್ಧರಿಸಿದಂತಿದೆ. ಗುರುವಾರ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಕೆಲವು ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದನ್ನು ಸಚಿವ ಸಂಪುಟ ಸದ್ಯಕ್ಕೆ ತಡೆ ಹಿಡಿದಿರುವುದೂ ಇದಕ್ಕೆ ಪುಷ್ಟಿ ನೀಡಿದೆ.ಹೀಗೆ ವಿಪಕ್ಷಗಳ ಟೀಕೆಯಿಂದಾಗಿ ಕ್ಯಾಬಿನೆಟ್​ನಲ್ಲೂ ಕೆಲವು ವಿಷಯಗಳ ನಿರ್ಧಾರ ಕೈಗೊಳ್ಳುವುದನ್ನು ರಾಜ್ಯ ಸರ್ಕಾರ ಮುಂದೂಡಿದೆ. ಅಲ್ಪಸಂಖ್ಯಾತ ಇಲಾಖೆಯ ವಿಷಯಗಳ ಮೇಲೆ ನಿರ್ಧಾರ ಕೈಗೊಳ್ಳುವುದಕ್ಕೆ ಕ್ಯಾಬಿನೆಟ್ ಹಿಂದೇಟು ಹಾಕಿದೆ.‌ ಗುರುವಾರ ನಡೆದ ಕ್ಯಾಬಿನೆಟ್‌ ಮೀಟಿಂಗ್​ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿದ ಮೂರು ವಿಷಯಗಳ ಪ್ರಸ್ತಾವನೆ ಇತ್ತು.‌ ಅವುಗಳನ್ನು ಮುಂದೂಡಿದ ಸಂಪುಟ, ಅಲ್ಪಸಂಖ್ಯಾತ ಸಮುದಾಯ ವಿಷಯಗಳ ಯಾವುದೇ ನಿರ್ಣಯ ಕೈಗೊಳ್ಳದೇ ಮುಂದೂಡಿಕೆ ಮಾಡಿದೆ. ಮುಸ್ಲಿಂ ಓಲೈಕೆ ಎಂಬ ಟೀಕೆಗೆ ಗುರಿಯಾಗಿರುವ ಸರ್ಕಾರ ಎಚ್ಚರಿಕೆ ಹೆಜ್ಜೆ ಇಟ್ಟಿದೆ.

ಸಂಪುಟ ಸಭೆಯಲ್ಲಿ ಮುಂದೂಡಿಕೆಯಾದ ಪ್ರಸ್ತಾವನೆಗಳು

  1. ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024ಕ್ಕೆ ಅನುಮೋದನೆ ನೀಡುವುದು.
  2. ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ತಾಂತ್ರಿಕ ಶಿಕ್ಷಣ) (ತಿದ್ದುಪಡಿ) ನಿಯಮಗಳು, 2024″ಕ್ಕೆ ಅನುಮೋದನೆ ನೀಡುವುದು.
  3. ರಾಜ್ಯದಲ್ಲಿ ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಇರುವ ನಿಯಮ / ಆದೇಶಗಳನ್ನು ಪರಿಷ್ಕರಿಸುವ ಬಗ್ಗೆ.
  4. ಮೂರು ವಿಚಾರಗಳ ಮೇಲೆ ಯಾವುದೇ ನಿರ್ಣಯ ಕೈಗೊಳ್ಳದೆ ಸಚಿವ ಸಂಪುಟ ಇವುಗಳನ್ನು ಮುಂದೂಡಿಕೆ ಮಾಡಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ವಿಚಾರಕ್ಕೆ ಸರ್ಕಾರ ಯಾವುದೇ ಮುಜುಗರವಿಲ್ಲದೇ ಎದೆ ತಟ್ಟಿ ಸತ್ಯ ಹೇಳಬೇಕಿತ್ತು. ಆದರೆ ಮುಸ್ಲಿಂ ಮೀಸಲಾತಿಯನ್ನೂ ಕೂಡ ಎಲ್ಲೋ ಒಂದು ಕಡೆ ಅಳುಕಿನಿಂದಲೇ ಅಲ್ಲಗಳೆದ ಕಾಂಗ್ರೆಸ್, ಬಹುಸಂಖ್ಯಾತರ ಸಿಟ್ಟಿಗೆ ಗುರಿಯಾಗುವ ಆತಂಕದಲ್ಲಿದೆ.

Comments (0)

Your email address will not be published. Required fields are marked *

Back to top button