ಬೆಂಗಳೂರು: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ನಾಳೆ(ಮಾರ್ಚ್ 22) ಅಖಂಡ ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಇನ್ನು ಕರ್ನಾಟಕ ಬಂದ್ಗೆ ಬಹುತೇಕ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿದ್ದು ಬಂದ್ ಯಶಸ್ವಿಯಾಗುವ ಲಕ್ಷಣಗಳು ಗೋಚರವಾಗಿವೆ. ಹಾಗಿದ್ರೆ, ಬಂದ್ಗೆ ಯಾವೆಲ್ಲಾ ಸಂಘಟನೆಗಳ ಬೆಂಬಲವಿದೆ, ನಾಳೆ ಏನಿರುತ್ತೆ, ಏನಿರಲ್ಲಾ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಂದ್ಗೆ ಸಂಪೂರ್ಣ ಬೆಂಬಲ ನೀಡುವವರು:
- ಓಲಾ- ಉಬರ್ ಚಾಲಕರ ಸಂಘ
- ಶಿವರಾಮೇಗೌಡ ಬಣ
- ಕರವೇ ಗಜಕೇಸರಿ ಸೇನೆ
- ಡಾ.ರಾಜ್ ಕುಮಾರ್ ಅಭಿಮಾನಿ ಸಂಘ
- ವೀರ ಕನ್ನಡಿಗರ ಸೇನೆ
- ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು
- ರೂಪೇಶ್ ರಾಜಣ್ಣ ಬಣ
- ಬೆಂಗಳೂರು ಆಟೋ ಸೇನೆ
- ಜಯಭಾರತ್ ಚಾಲಕರ ಸಂಘ
- ಕರ್ನಾಟಕ ಜನಪರ ವೇದಿಕೆ
- ಆದರ್ಶ ಆಟೋ ಯೂನಿಯನ್
- ಗೂಡ್ಸ್ ಚಾಲಕರ ಸಂಘ
ನೈತಿಕ ಬೆಂಬಲ ನೀಡಿದವರು:
- ಮದ್ಯ ಮಾರಾಟಗಾರರ ಸಂಘ
- ಕೆಲ ಮಾಲ್ ಅಸೋಸಿಯೇಷನ್
- ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು
- ಹೋಟೆಲ್ ಅಸೋಸಿಯೇಷನ್
- ಬೆಂಗಳೂರು ಸಂಚಾರಿ ಆಟೋ ಸೇನೆ
- APMC ಮಾರುಕಟ್ಟೆಗಳ ಒಕ್ಕೂಟ
- ಸರ್ವ ಸಂಘಟನೆಗಳ ಒಕ್ಕೂಟ
- ಖಾಸಗಿ ಸಾರಿಗೆ ಒಕ್ಕೂಟ
- ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ
- ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ
- ಪೀಣ್ಯ ಕಾರ್ಮಿಕರ ಸಂಘ
- ಬೀದಿ ಬದಿ ವ್ಯಾಪಾರಿಗಳ ಸಂಘಟನೆ
- ಕರ್ನಾಟಕ ರಾಜ್ಯ ರೈತ ಸಂಘಟನೆ
- ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್
- ಖಾಸಗಿ ಶಾಲೆಗಳ ಒಕ್ಕೂಟ ಕೃಪಾ
- ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ
- ಪೋಷಕರ ಸಮನ್ವಯ ಸಮಿತಿ
- ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ
- ಪೀಸ್ ಆಟೋ ಸಂಘಟನೆ
- ಕರುನಾಡು ಕಾರ್ಮಿಕ ಸೇನೆ
- BMTC-KSRTC ನೌಕರರ ಸಂಘ
- ನಮ್ಮ ಚಾಲಕರ ಪರಿಷತ್
- ಏರ್ಪೋರ್ಟ್ ಟ್ಯಾಕ್ಸಿ
- ಗಾರ್ಮೆಂಟ್ಸ್ ಅಸೋಸಿಯೇಷನ್ ನ
- ಲಾರಿ ಚಾಲಕರ ಸಂಘ
ಬಂದ್ ವೇಳೆ ಏನಿರುತ್ತೆ?
- ಹಾಲು, ದಿನಪತ್ರಿಕೆ,ಮೆಡಿಕಲ್
- ವೈದ್ಯಕೀಯ ಸೇವೆ ಎಂದಿನಂತೆ ಇರಲಿದೆ
- ಮೆಟ್ರೋ ಸಂಚಾರ, BMTC,KSRTC,ರೈಲು
- ಶಾಲಾ ವಾಹನದ ವ್ಯವಸ್ಥೆ,ಖಾಸಗಿ ಬಸ್
- ಆ್ಯಂಬುಲೆನ್ಸ್ ,ಹೋಲ್ ಸೆಲ್ ಬಟ್ಟೆ ಅಂಗಡಿ
- ತರಕಾರಿ,ಹೂ, ಹಣ್ಣುಗಳು, ಸೂಪರ್ ಮಾರ್ಕೆಟ್
- ಹೋಟೆಲ್ ಗಳ ಎಂದಿನಂತೆ ಓಪನ್ ಇರಲಿದೆ
- ಬಾರ್ ಗಳು ಓಪನ್,ಏರ್ ಪೋರ್ಟ್ ಟ್ಯಾಕ್ಸಿ ಸೇವೆ
- 65% ಆಟೋಗಳ ಸೇವೆ ಬಂದ್ ದಿನ ಇರಲಿದೆ
ಏನಿರಲ್ಲ?
- ಮಧ್ಯಾಹ್ನತನಕ ಥಿಯೇಟರ್ ಗಳು ಬಂದ್
- ಓಲಾ-ಊಬರ್ ಸೇವೆಯಲ್ಲಿ ವ್ಯತ್ಯಯ
- 35% ಆಟೋ ಸೇವೆಯಲ್ಲಿ ತುಸು ವ್ಯತ್ಯಯ
- ಗೂಡ್ಸ್ ವಾಹನಗಳ ಸೇವೆಯಲ್ಲಿ ವ್ಯತ್ಯಯ
ಇನ್ನು ಶಾಲಾ ಕಾಲೇಜು ನಡೆಸುವ ಹಾಗೂ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿ ಸರ್ಕಾರದಿಂದ ಇನ್ನಷ್ಟೇ ಅಧಿಕೃತ ನಿರ್ಧಾರ ಪ್ರಕಟಗೊಳ್ಳಬೇಕಿದೆ. ಶಿಕ್ಷಣ ಸಚಿವರು ತಿಳಿಸಿರುವಂತೆ, ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಶೆಡ್ಯೂಲ್ ಇಲ್ಲವಾದ್ದರಿಂದ ಆ ಕುರಿತು ಆತಂಕ ಬೇಕಿಲ್ಲ. ಬಂದ್ಗೆ ಸರ್ಕಾರದ ಬೆಂಬಲವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಚಿತಪಡಿಸಿದ್ದಾರೆ.