Tuesday, June 24, 2025
25.9 C
Bengaluru
Google search engine
LIVE
ಮನೆ#Exclusive Newsರಾಜ್ಯ ಬಿಜೆಪಿಯಲ್ಲಿ ಘರ್ ವಾಪಸಿ ಸದ್ದು.!

ರಾಜ್ಯ ಬಿಜೆಪಿಯಲ್ಲಿ ಘರ್ ವಾಪಸಿ ಸದ್ದು.!

ಬೆಂಗಳೂರು :

ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಬಿಜೆಪಿಯ ಮಾಜಿ‌ ಶಾಸಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂಬಂಧಿ ಎಸ್. ಐ. ಚಿಕ್ಕನಗೌಡರ್ ಕಳೆದ 20 ದಿನಗಳ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಜಗದೀಶ್ ಶೆಟ್ಟರ್ ಮುಂದಾಳತ್ವದಲ್ಲಿ ಕೈ ಹಿಡಿದಿದ್ದ ಚಿಕ್ಕನಗೌಡರ್ ಮತ್ತೆ ಬಿಜೆಪಿಗೆ ವಾಪಸ್ಸಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು.

ಮಾಜಿ ಶಾಸಕ ರೇಣುಕಾಚಾರ್ಯ ಜೊತೆ ಬಿಜೆಪಿ ಕಚೇರಿಯಲ್ಲಿ ಪ್ರತ್ಯಕ್ಷರಾದ ಚಿಕ್ಕನಗೌಡರ್..!!

ಕಳೆದ ವಿಧಾನಸಭಾ ಚುನಾವಣೆ ಸೋತ ಬಳಿಕ ಸೈಲೆಂಟ್ ಆಗಿದ್ದ ಚಿಕ್ಕನಗೌಡರ್ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಹಾಗೇಯೆ ಕಾಂಗ್ರೆಸ್ ಗೆ ಸೇರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ರಾಜ್ಯ ಬಿಜೆಪಿಯಲ್ಲಾದ ಬಹುದೊಡ್ಡ ಬದಲಾವಣೆಗಳ ಬಳಿಕ ಕಾಂಗ್ರೆಸ್ ತೊರೆದು ಕಮಲ ಹಿಡಿಯಲು ತಯಾರಾಗೋ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments