Tuesday, January 27, 2026
26.7 C
Bengaluru
Google search engine
LIVE
ಮನೆರಾಜ್ಯರಾಜ್ಯದ ಜನರಿಗೆ KERC ಶಾಕ್​​..!

ರಾಜ್ಯದ ಜನರಿಗೆ KERC ಶಾಕ್​​..!

ರಾಜ್ಯದ ಜನರಿಗೆ ಸರ್ಕಾರ ಶಾಕ್​ ಮೇಲೆ ಶಾಕ್​ ಕೊಡ್ತಿದೆ..ಇದರ ಬೆನ್ನಲ್ಲೆ ಸರ್ಕಾರ ಜನರಿಗೆ ಕರೆಂಟ್​ ಶಾಕ್​​ ಕೊಟ್ಟಿದೆ.. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೆ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ವಿದ್ಯುತ್ ದರ ಹೆಚ್ಚಳ ಇವರಿಗೆ ಮಾತ್ರ ಅನ್ವಯ..?

ವಿದ್ಯುತ್ ದರ ಹೆಚ್ಚಳ ಸಂಬಂಧ ಸಚಿವ ಶರಣಪ್ರಕಾಶ್‌ ಪಾಟೀಲ ಮಾತನಾಡಿ, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments