Sunday, December 7, 2025
23.6 C
Bengaluru
Google search engine
LIVE
ಮನೆಜಿಲ್ಲೆKSRTC ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ; ಬೆಚ್ಚಿಬಿದ್ದ ಪ್ರಯಾಣಿಕರು

KSRTC ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ; ಬೆಚ್ಚಿಬಿದ್ದ ಪ್ರಯಾಣಿಕರು

ಶಿವಮೊಗ್ಗ: ಕೆಎಸ್​​ಆರ್​​​ಟಿಸಿ ಬಸ್​ನ ಚಕ್ರಕ್ಕೆ ಸಿಲುಕಿ ನಾಡಬಾಂಬ್​​ ಸ್ಫೋಟಗೊಂಡಿದ್ದು, ಅದೃಷ್ಟವಶಾತ್​​ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ..

ಬಸ್​​ ಮುಡಬಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು, ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ದೊಡ್ಡ ಶಬ್ದ ಕೇಳಿಬಂದಿದ್ದು, ಶಬ್ದಕ್ಕೆ ನಿಯಂತ್ರಣ ಕಳೆದುಕೊಂಡ ಬಸ್​ ಚಾಲಕ ಪಕ್ಕದಲ್ಲಿದ್ದ ಟಿಸಿಗೆ ಡಿಕ್ಕಿ ಹೊಡೆದಿದೆ.. ತಕ್ಷಣ ಬಸ್​ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರಿಬ್ಬರೂ ಕೆಳಗೆ ಬಂದು ಪರಿಶೀಲಿಸಿದಾಗ, ನಾಡಬಾಂಬ್​​​​ ಸ್ಫೋಟಗೊಂಡಿರುವುದು ಬೆಳಕಿಗೆ ಬಂದಿದೆ.. ಬಸ್​ಸಿನ ಟೈಯರ್​​​ ಅಂಚಿಗೆ ತಗುಲಿ ನಾಡಬಾಂಬ್​​​ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿವೆ ಆಗಿ, ಬಸ್​​ನಲ್ಲಿ ಇದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ..

ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಸ್ಫೋಟದ ಹಿಂದಿನ ಉದ್ದೇಶ ಮತ್ತು ಬಾಂಬ್ ಇಟ್ಟವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನು ಹಂದಿಗಳಿಂದ ತಮ್ಮ ಬೆಳೆಯನ್ನು ರಕ್ಷಿಕೊಳ್ಳಲು ರೈತರು ನಾಡಬಾಂಬ್​​​​ಗಳನ್ನು ಬಳಸುತ್ತಿದ್ದು, ಬಾಂಬ್​​ ಕೊಂಡೊಯ್ಯುವ ವೇಳೆ ರಸ್ತೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments