ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ನಡೆದಿದ್ದ ಹತ್ಯೆ ಸಂಬಂಧ ಪೊಲೀಸ್ ಇನ್ಸ್ಪೆಕ್ಟರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್ ಕಾನ್ಸ್ಸ್ಟೇಬಲ್ ಚಂದ್ರ ಪಿ ಮತ್ತು ಕಾನ್ಸ್ಸ್ಟೇಬಲ್ ಯಲ್ಲಾಲಿಂಗ ಅಮಾನತುಗೊಂಡವರು. ಈ ಮೂವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ.
ಕುಡುಪಿನಲ್ಲಿ ಕ್ರಿಕೆಟ್ ಆಟದ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದಡಿ ಕೇರಳ ರಾಜ್ಯದ ವಯನಾಡಿನ ಆಶ್ರಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಕೃತ್ಯದ ಬಗ್ಗೆ ದೀಪಕ್ ಎಂಬವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಪ್ರಕರಣದಲ್ಲಿ 20 ಮಂದಿಯನ್ನು ಬಂಧಿಸಲಾಗಿತ್ತು.
ಆದರೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಆರಂಭದಲ್ಲಿ ಯುವಕನ ಸಾವನ್ನು ಅಸಹಜ ಸಾವು ಎಂದು ಪರಿಗಣಿಸಿ ಎಫ್ಐಆರ್ ದಾಖಲಾಗಿಸಲಾಗಿತ್ತು. ಆ ಬಳಿಕ ಗುಂಪು ಹಲ್ಲೆಯಿಂದ ಆದ ಕೊಲೆ ಎಂದು ಪ್ರಕರಣವನ್ನು ಮಾರ್ಪಾಡು ಮಾಡಲಾಗಿತ್ತು.