Thursday, November 20, 2025
19.1 C
Bengaluru
Google search engine
LIVE
ಮನೆ#Exclusive Newsಜಾಮೀನು ರದ್ದು; ನಟ ದರ್ಶನ್​ ಅರೆಸ್ಟ್

ಜಾಮೀನು ರದ್ದು; ನಟ ದರ್ಶನ್​ ಅರೆಸ್ಟ್

ಬೆಂಗಳೂರು: ಸುಪ್ರೀಂಕೋರ್ಟ್​ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದ್ದು, ಈ ಹಿನ್ನೆಲೆ ಆರೋಪಿಗಳಾದ ಎ1 ಪವಿತ್ರಾಗೌಡ ಮತ್ತು ನಟ ದರ್ಶನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿದ್ದ ದರ್ಶನ್​ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುಂಚೆ ದರ್ಶನ್​ ಅವರು ಕೋರ್ಟ್ ಮುಂದೆ ಹಾಜರಾಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದ್ರೆ ಅದಕ್ಕೂ ಮೊದಲೇ ಪೊಲೀಸರು ಅಪಾರ್ಟ್​ಮೆಂಟ್​ಗೆ ತೆರಳಿ ಅವರನ್ನು ಬಂಧಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments