Wednesday, August 20, 2025
20.6 C
Bengaluru
Google search engine
LIVE
ಮನೆರಾಜಕೀಯಕಾಂಗ್ರೆಸ್ ಸಹಾಯದಿಂದ ಪ್ರಧಾನಿ ಆಗಿದ್ದನ್ನು ಮರೆಯಬಾರದು - ಎಚ್,ಎ,ವೆಂಕಟೇಶ್

ಕಾಂಗ್ರೆಸ್ ಸಹಾಯದಿಂದ ಪ್ರಧಾನಿ ಆಗಿದ್ದನ್ನು ಮರೆಯಬಾರದು – ಎಚ್,ಎ,ವೆಂಕಟೇಶ್

ಮೈಸೂರು ; ಕಾಂಗ್ರೆಸ್ ಸಹಾಯದಿಂದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದನ್ನು ಮರೆಯಬಾರದು. ಕಾಂಗ್ರೆಸ್ ಜಾತ್ಯತೀತ ನಿಲುವಿನಲ್ಲಿ ಬದ್ಧತೆ ಹೊಂದಿದ್ದ ಕಾರಣಕ್ಕಾಗಿಯೇ ಹೆಚ್. ಡಿ ದೇವೇಗೌಡರಿಗೆ ಪ್ರಧಾನಿ ಸ್ಥಾನಕ್ಕೆ ಬೆಂಬಲ ನೀಡಿತ್ತು ಎಂಬುದನ್ನು ಮರೆಯಬಾರದು ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್ ಅವರು ಕಾಂಗ್ರೆಸ್ ಪಕ್ಷ ಅನೇಕರನ್ನು ಮುಖ್ಯಮಂತ್ರಿ, ಪ್ರಧಾನಮಂತ್ರಿಯನ್ನಾಗಿ ಮಾಡಿದೆ. ತೃತೀಯ ರಂಗದಲ್ಲಿ ಅನೇಕರು ಹಿರಿಯರು ಇದ್ದರು. ಆಗ ಸೋನಿಯಾಗಾಂಧಿ ಅವರೇ ಕನ್ನಡಿಗರೊಬ್ಬರು ಪಿಎಂ ಆಗಲೆಂದು ಬಯಸಿ ದೇವೇಗೌಡರಿಗೆ ಬೆಂಬಲ ನೀಡಿದರು. ಅದೇ ರೀತಿ ಕರ್ನಾಟಕದಲ್ಲಿ ಕಡಿಮೆ ಸ್ಥಾನ ಹೊಂದಿದ್ದರೂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಬೆಂಬಲ ನೀಡಿತ್ತು.

ಕಾಂಗ್ರೆಸ್ ಮಾಡಿದ ಸಹಾಯವನ್ನು ಮರೆತು ಈಗ ಎನ್‌ಡಿಎ ಓಲೈಕೆಯ ಮಾತುಗಳನ್ನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments