Wednesday, August 20, 2025
20.6 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಲಂಚ ಸ್ವೀಕರಿಸುವಾಗಲೇ ಲೋಕಾ ದಾಳಿ; ಕಾವೇರಿ ನಿಗಮದ ಇಂಜಿನಿಯರ್​ ಲಾಕ್

ಲಂಚ ಸ್ವೀಕರಿಸುವಾಗಲೇ ಲೋಕಾ ದಾಳಿ; ಕಾವೇರಿ ನಿಗಮದ ಇಂಜಿನಿಯರ್​ ಲಾಕ್

ಮೈಸೂರು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಕಾವೇರಿ ರಂಗನಾಥ್ ಹಾಗೂ ಅಕೌಂಟ್ ಸೂಪರಿಡೆಂಟ್ ಉಮಾಮಹೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಟೆಂಡರ್ ಹಣ ಬಿಡುಗಡೆಗೆ ಚಾಮರಾಜನಗರ ನಿವಾಸಿ ಅಬ್ದುಲ್ ಅಜೀಜ್ ಬಳಿ ಇಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2022ರಲ್ಲಿ ನಾಲೆ ರಿಪೇರಿಗೆ ಟೆಂಡರ್ ಕರೆಯಲಾಗಿತ್ತು. 23.10 ಲಕ್ಷ ರೂ.ಗೆ ಕಾಮಗಾರಿ ಹಣ ಬಿಡುಗಡೆ ಮಾಡಲು ಮೊದಲು 6% ಲಂಚ ಬೇಡಿಕೆ ಇಟ್ಟಿದ್ದರು

ಸ್ವಲ್ಪ ದಿನಗಳ ಬಳಿಕ 1 ಲಕ್ಷದ 45 ಸಾವಿರ ರೂ.ಗೆ ಡಿಮ್ಯಾಂಡ್ ಮಾಡಲಾಗಿತ್ತು. ಈ ಮೂಲಕ ಕಾಮಗಾರಿ ಹಣ ಪಡೆಯಲು ಬಂದಾಗ 10% ಲಂಚ ಏರಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ. ಇಂದು (ಏ.7) ಇಬ್ಬರೂ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments