Friday, August 22, 2025
24.2 C
Bengaluru
Google search engine
LIVE
ಮನೆ#Exclusive Newsಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ಬೆಂಗಳೂರಿನ ಅಬಕಾರಿ ಕಚೇರಿಗಳನ್ನು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ‌.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ.

ಬೆಂಗಳೂರು, (ಸೆಪ್ಟೆಂಬರ್ 24): ಬೆಂಗಳೂರಿನ ಅಬಕಾರಿ ಕಚೇರಿಗಳನ್ನು ಪರಿಶೀಲನೆಗೆ ವಾರೆಂಟ್​ ಬೆನ್ನಲ್ಲೇ ಇಂದು (ಸೆಪ್ಟೆಂಬರ್ 24) ಲೋಕಾಯುಕ್ತ ದಾಳಿ ಮಾಡಿದ್ದು, ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆಯಾಗಿವೆ. ಯಶವಂತಪುರ, ಬ್ಯಾಟರಾಯನಪುರ ಕಚೇರಿಗಳಲ್ಲಿ ಸಿಗರೇಟ್​ನ ತಂಬಾಕು ತೆಗೆದು ಗಾಂಜಾ ತುಂಬಿಟ್ಟಿದ್ದು ಪತ್ತೆಯಾಗಿದ್ದು, ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಉಪಲೋಕಾಯುಕ್ತ ಬಿ. ವೀರಪ್ಪ ಪರಿಶೀಲನೆ ನಡೆಸಿದ್ದಾರೆ.

ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ‌.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಖುದ್ದು ಪರಿಶೀಲನೆಗೆ ವಾರೆಂಟ್ ಹೊರಡಿಸಲಾಗಿತ್ತು. ಅದರಂತೆ ಸಂಜೆ ವೇಳೆ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments