Wednesday, January 28, 2026
18.8 C
Bengaluru
Google search engine
LIVE
ಮನೆUncategorizedಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಜೆಇ ನಾಗರಾಜ್ ನರಸಿಂಹ ಲೋಕಾ ಬಲೆಗೆ..!

ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಜೆಇ ನಾಗರಾಜ್ ನರಸಿಂಹ ಲೋಕಾ ಬಲೆಗೆ..!

ಬೆಂಗಳೂರು: ಹೊಸ ವಿದ್ಯುತ್ ಸಂಪರ್ಕ ಕಲ್ಪಿಸಲು ₹4.50 ಲಕ್ಷ ಲಂಚಕ್ಕೆ ಬೇಡಿಕೆ ಇರಿಸಿ ಮುಂಗಡವಾಗಿ ₹ 50,000 ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಕಿರಿಯ ಎಂಜಿನಿಯರ್ ನಾಗರಾಜ್ ನರಸಿಂಹ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಣಸವಾಡಿ ಇ-8 ಉಪ ಘಟಕದ ಕಿರಿಯ ಎಂಜಿನಿಯರ್ ನಾಗರಾಜ್ ನರಸಿಂಹ ಅವರನ್ನು ಉದ್ಯಾನವೊಂದರ ಬಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ವಶಕ್ಕೆ ಪಡೆಯಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ಹೇಳಿದರು.

ನಾಗರಾಜ್ ಲಂಚಕ್ಕೆ ಬೇಡಿಕೆ ಇರಿಸಿದ್ದ ಬಗ್ಗೆ ಗುತ್ತಿಗೆದಾರರೊಬ್ಬರು ದೂರು ನೀಡಿದ್ದರು. ಅದರನ್ವಯ ದಾಳಿ ಮಾಡಿ ಪುರಾವೆ ಸಮೇತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments