Wednesday, January 28, 2026
18.8 C
Bengaluru
Google search engine
LIVE
ಮನೆಜಿಲ್ಲೆಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಎಡಿಎಲ್​ ಆರ್​ ಚಾಲಕ

ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಎಡಿಎಲ್​ ಆರ್​ ಚಾಲಕ

ಚಿತ್ರದುರ್ಗ : ಚಳ್ಳಕೆರೆ ಭೂಮಾಪನ ಇಲಾಖೆ ಅಧಿಕಾರಿ ಕಾರು ಚಾಲಕ ಲಂಚ ಸ್ವೀಕರಿಸುವಾಗ ಚಾಲಕನ್ನು ವಶಕ್ಕೆ ಪಡೆದ ಲೋಕಾಯುಕ್ತರು. ಎಡಿಎಲ್ ಆರ್ ಗಂಗಣ್ಣ ಲೋಕಾಯುಕ್ತರನ್ನು ನೋಡಿದ ಕೂಡಲೇ ಪರಾರಿಯಾದ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆ.ಜಿ.ಜಯಣ್ಣ ಜಮೀನನ್ನು ಪಾಲು ವಿಭಾಗ ಮಾಡಿಸಿಕೊಳ್ಳಲು ಒಂದು ವರ್ಷದಿಂದ ತಾಲೂಕು ಕಚೇರಿಗೆ ಅಲೆದಾಡಿದರೂ, ಅಧಿಕಾರಿಗಳು ಪಾಲು ವಿಭಾಗ ಮಾಡಿಕೊಡದೆ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟು, ಕೊನೆಗೆ ಇದು ಸರ್ವೇ ಇಲಾಖೆ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ್ದಾರೆ.
ಭೂಮಾಪನ ಇಲಾಖೆಯ ಎಡಿಎಲ್ ಆರ್ ಗಂಗಣ್ಣ 15 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು ಹತ್ತು ಸಾವಿರರೂಗಳಿಗೆ ಒಪ್ಪಿಕೊಂಡಿದ್ದ ರೈತ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ.

ಇಂದು ಹಣ ನೀಡಲು ಬಂದಾಗ ವಾಹನ ಚಾಲಕನ ಕೈಗೆ ಕೊಡುವಂತೆ ತಿಳಿಸಿದ್ದು, ವಾಹನ ಚಾಲಕನ ಕೈಗೆ ಹಣ ನೀಡುವಾಗ ಲೋಕಾಯುಕ್ತರು ಹಣದ ಸಮೇತ ವಶಕ್ಕೆ ಪಡೆದಿದ್ದು ಲೋಕಾಯುಕ್ತ ಪೊಲೀಸರನ್ನು ಕಂಡ ತಕ್ಷಣ ಎಡಿಎಲ್ ಆರ್ ಗಂಗಣ್ಣ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ವಾಹನ ಚಾಲಕನ್ನು ವಶಕ್ತೆ ಪಡೆದು ತನಿಖೆ ಕೈಗೊಂಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments