#Exclusive NewsTop Newsದೇಶ/ವಿದೇಶಸುದ್ದಿ

ದೇಶದ ಅರ್ಥವ್ಯವಸ್ಥೆವನ್ನು ಆ ಒಂದು ಬಜೆಟ್​ನಿಂದ ರಕ್ಷಿಸಿದ್ದ ಮನಮೋಹನ್ ಸಿಂಗ್!

ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದ ಸಮಯವದು. 1991ರಲ್ಲಿ ದೇಶದ ಅರ್ಥ ವ್ಯವಸ್ಥೆ ಸಂಪೂರ್ಣ ಹಳ್ಳಹಿಡಿದಿತ್ತು. ಪಿವಿ ನರಸಿಂಹರಾವ್‌ ಅವರಿಗೂ ಹಿಂದೆ ಪ್ರಧಾನಿಯಾಗಿದ್ದ ಚಂದ್ರಶೇಖರ್‌ ಅವರು ಚಿನ್ನವನ್ನು ವಿದೇಶದಲ್ಲಿ ಅಡವಿಟ್ಟು ಬಂದಿದ್ದರು. ಭಾರತದ ಕೈಯಲ್ಲಿ ಆಗ ಇದ್ದದ್ದು 1 ಶತಕೋಟಿ ಡಾಲರ್‌ ವಿದೇಶಿ ವಿನಿಮಯದ ಮೀಸಲು ನಿಧಿ ಮಾತ್ರ. 15 ದಿನಗಳಲ್ಲಿ ದೇಶ ದಿವಾಳಿಯಾಗುವ ಸ್ಥಿತಿ ತಲುಪಿತ್ತು. ಇಂತಹ ಹೊತ್ತಿನಲ್ಲಿ ಕೇಂದ್ರ ಹಣಕಾಸು ಸಚಿವನಾಗುವಂತೆ ಆಗಿನ ಪ್ರಧಾನಿ ಪಿವಿ ನರಸಿಂಹರಾವ್‌ ಅವರು ಡಾ. ಮನಮೋಹನ್ ಸಿಂಗ್‌ರನ್ನು ಆಹ್ವಾನಿಸಿದ್ದರು. ಒಂದು ಕಡೆ ಆತಂಕ. ಆದರೆ ಆಹ್ವಾನ ಸ್ವೀಕರಿಸಲು ಸಿಂಗ್‌ ಹಿಂದೆ ಮುಂದೆ ನೋಡಲಿಲ್ಲ. ವಿತ್ತ ಸಚಿವನಾಗಿ ಅಧಿಕಾರ ಸ್ವೀಕರಿಸಿಬಿಟ್ಟರು. ನೆಹರೂ ಯುಗಕ್ಕೆ ಸಂಬಂಧಿಸಿದ ಸಮಾಜವಾದಿ ಆರ್ಥಿಕತೆಯ ನಿರ್ಬಂಧಗಳಿಂದ ಭಾರತೀಯ ಆರ್ಥಿಕತೆಯನ್ನು ಹೊರ ತರಲು ದಿಟ್ಟ ಹೆಜ್ಜೆ ಇಟ್ಟರು.

ಆರ್ಥಿಕತೆಗೆ ಹೊಸ ತಿರುವು ನೀಡಿದ1991ರ ಬಜೆಟ್

1991ರಲ್ಲಿ ಭಾರತವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಯಿತು. ವಿದೇಶಿ ವಿನಿಮಯದ ಕೊರತೆ, ಚಲಾವಣೆಯ ಕುಸಿತ, ಮತ್ತು ಉನ್ನತ ದರದ ದೇಣಿಗೆಯ ಜವಾಬ್ದಾರಿ ಸರ್ಕಾರದ ಮೇಲೆ ಹೊರೆಯಾಗಿತ್ತು. ಇಂತಹ ಸಮಯದಲ್ಲಿ ಆರ್ಥಿಕ ಕ್ಷೇತ್ರದಲ್ಲಿ ಬದಲಾವಣೆ ಅಗತ್ಯವಾಗಿತ್ತು. ಆರ್ಥಿಕ ಸಂಕಷ್ಟದಲ್ಲಿದ್ದ ಭಾರತವನ್ನು 1991ರ ಬಜೆಟ್ ಮೂಲಕ ಅಂದಿನ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ಪಾರು ಮಾಡಿದರು. 1991ರ ಬಜೆಟ್ ಅನ್ನು ಭಾರತೀಯ ಇತಿಹಾಸದಲ್ಲಿ ದೇಶದ ಆರ್ಥಿಕತೆಗೆ ಹೊಸ ತಿರುವು ನೀಡಿದ ಬಜೆಟ್ ಎಂದು ಕರೆಯಲಾಗುತ್ತದೆ.ಡಾ. ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ನರಸಿಂಹರಾವ್ ಸರ್ಕಾರದ ಈ ಬಜೆಟ್ ದೇಶದ ಆರ್ಥಿಕತೆಯನ್ನು ಜಾಗತಿಕ ವಾಣಿಜ್ಯಕ್ಕೆ ಬಾಗಿಲನ್ನು ತೆರೆಯಿತು. ಆ ಮೂಲಕ ಅಂದಿನಿಂದ ಭಾರತ ಮುಕ್ತ ಮಾರುಕಟ್ಟೆಗೆ ತನ್ನನ್ನು ತೆರೆದುಕೊಂಡಿತು.

ಆ ಬಜೆಟ್​​ನ ಪ್ರಮುಖ ನಿರ್ಧಾರಗಳು ಯಾವುವೆಂಬ ಮಾಹಿತಿ ಇಲ್ಲಿದೆ.

ಆರ್ಥಿಕ ಉದಾರೀಕರಣ

ಬಜೆಟ್ ಮೂಲಕ ವಾಣಿಜ್ಯ ನಿಯಂತ್ರಣಗಳನ್ನು ಕಡಿತಗೊಳಿಸಿ, ದೇಶದ ಆರ್ಥಿಕತೆಯನ್ನು ಜಾಗತಿಕ ವಾಣಿಜ್ಯಕ್ಕೆ ತೆರೆದರು. ಇಂಪೋರ್ಟ್ ಮತ್ತು ಎಕ್ಸ್‌ಪೋರ್ಟ್ ನಿಯಮಗಳನ್ನು ಸರಳಗೊಳಿಸಲಾಯಿತು.

ಖಾಸಗೀಕರಣ

ಸರ್ಕಾರ ಹಿತಾಸಕ್ತಿಯಲ್ಲಿರುವ ಸಾರ್ವಜನಿಕ ವಲಯದ ಘಟಕಗಳಲ್ಲಿ ಖಾಸಗೀಕರಣವನ್ನು ಪ್ರಾರಂಭಿಸಿ, ಖಾಸಗಿ ವಲಯದ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸಲಾಯಿತು.

ಉದ್ಯಮಗಳಿಗೆ ಹೆಚ್ಚಿನ ಸ್ವಾತಂತ್ರ್ಯ

ಕೈಗಾರಿಕಾ ಪರವಾನಗಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸುವ ಮೂಲಕ, ಉದ್ಯಮಗಳಿಗೆ ಹೆಚ್ಚಿನ ಸ್ವಾತಂತ್ರ್ಯವನ್ನು ನೀಡಿದರು.

ವಿದೇಶಿ ಬಂಡವಾಳ ಹೂಡಿಕೆಗೆ ಹೊಸ ನೀತಿ

ವಿದೇಶಿ ಬಂಡವಾಳ ಹೂಡಿಕೆ (FDI) ಹೆಚ್ಚಿಸಲು ಹೊಸ ನೀತಿಗಳನ್ನು ಅಳವಡಿಸಿದರು. ವಿದೇಶಿ ವಿನಿಮಯ ರಿಸರ್ವ್‌ಗಳನ್ನು ವೃದ್ಧಿಸಲು ರೂಪಾಯಿ ಚಲಾವಣೆಯಲ್ಲಿ ಬದಲಾವಣೆ ಮಾಡಿದರು.

ತೆರಿಗೆ ಸುಧಾರಣೆಗಳು

ಸರಕು ಮತ್ತು ಸೇವೆಗಳ ತೆರಿಗೆಯನ್ನು ಸರಳಗೊಳಿಸಿ, ಆರ್ಥಿಕ ಪ್ರಕ್ರಿಯೆಗಳನ್ನು ಸುಗಮಗೊಳಿಸಿದರು.

 

Comments (0)

Your email address will not be published. Required fields are marked *

Back to top button