ಆರ್ಥಿಕತೆಗೆ ಹೊಸ ತಿರುವು ನೀಡಿದ1991ರ ಬಜೆಟ್
1991ರಲ್ಲಿ ಭಾರತವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಯಿತು. ವಿದೇಶಿ ವಿನಿಮಯದ ಕೊರತೆ, ಚಲಾವಣೆಯ ಕುಸಿತ, ಮತ್ತು ಉನ್ನತ ದರದ ದೇಣಿಗೆಯ ಜವಾಬ್ದಾರಿ ಸರ್ಕಾರದ ಮೇಲೆ ಹೊರೆಯಾಗಿತ್ತು. ಇಂತಹ ಸಮಯದಲ್ಲಿ ಆರ್ಥಿಕ ಕ್ಷೇತ್ರದಲ್ಲಿ ಬದಲಾವಣೆ ಅಗತ್ಯವಾಗಿತ್ತು. ಆರ್ಥಿಕ ಸಂಕಷ್ಟದಲ್ಲಿದ್ದ ಭಾರತವನ್ನು 1991ರ ಬಜೆಟ್ ಮೂಲಕ ಅಂದಿನ ಹಣಕಾಸು ಸಚಿವರಾಗಿದ್ದ ಮನಮೋಹನ್ ಸಿಂಗ್ ಪಾರು ಮಾಡಿದರು. 1991ರ ಬಜೆಟ್ ಅನ್ನು ಭಾರತೀಯ ಇತಿಹಾಸದಲ್ಲಿ ದೇಶದ ಆರ್ಥಿಕತೆಗೆ ಹೊಸ ತಿರುವು ನೀಡಿದ ಬಜೆಟ್ ಎಂದು ಕರೆಯಲಾಗುತ್ತದೆ.ಡಾ. ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ನರಸಿಂಹರಾವ್ ಸರ್ಕಾರದ ಈ ಬಜೆಟ್ ದೇಶದ ಆರ್ಥಿಕತೆಯನ್ನು ಜಾಗತಿಕ ವಾಣಿಜ್ಯಕ್ಕೆ ಬಾಗಿಲನ್ನು ತೆರೆಯಿತು. ಆ ಮೂಲಕ ಅಂದಿನಿಂದ ಭಾರತ ಮುಕ್ತ ಮಾರುಕಟ್ಟೆಗೆ ತನ್ನನ್ನು ತೆರೆದುಕೊಂಡಿತು.
ಆ ಬಜೆಟ್ನ ಪ್ರಮುಖ ನಿರ್ಧಾರಗಳು ಯಾವುವೆಂಬ ಮಾಹಿತಿ ಇಲ್ಲಿದೆ.
ಆರ್ಥಿಕ ಉದಾರೀಕರಣ
ಬಜೆಟ್ ಮೂಲಕ ವಾಣಿಜ್ಯ ನಿಯಂತ್ರಣಗಳನ್ನು ಕಡಿತಗೊಳಿಸಿ, ದೇಶದ ಆರ್ಥಿಕತೆಯನ್ನು ಜಾಗತಿಕ ವಾಣಿಜ್ಯಕ್ಕೆ ತೆರೆದರು. ಇಂಪೋರ್ಟ್ ಮತ್ತು ಎಕ್ಸ್ಪೋರ್ಟ್ ನಿಯಮಗಳನ್ನು ಸರಳಗೊಳಿಸಲಾಯಿತು.
ಖಾಸಗೀಕರಣ
ಸರ್ಕಾರ ಹಿತಾಸಕ್ತಿಯಲ್ಲಿರುವ ಸಾರ್ವಜನಿಕ ವಲಯದ ಘಟಕಗಳಲ್ಲಿ ಖಾಸಗೀಕರಣವನ್ನು ಪ್ರಾರಂಭಿಸಿ, ಖಾಸಗಿ ವಲಯದ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸಲಾಯಿತು.
ಉದ್ಯಮಗಳಿಗೆ ಹೆಚ್ಚಿನ ಸ್ವಾತಂತ್ರ್ಯ
ಕೈಗಾರಿಕಾ ಪರವಾನಗಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸುವ ಮೂಲಕ, ಉದ್ಯಮಗಳಿಗೆ ಹೆಚ್ಚಿನ ಸ್ವಾತಂತ್ರ್ಯವನ್ನು ನೀಡಿದರು.
ವಿದೇಶಿ ಬಂಡವಾಳ ಹೂಡಿಕೆಗೆ ಹೊಸ ನೀತಿ
ವಿದೇಶಿ ಬಂಡವಾಳ ಹೂಡಿಕೆ (FDI) ಹೆಚ್ಚಿಸಲು ಹೊಸ ನೀತಿಗಳನ್ನು ಅಳವಡಿಸಿದರು. ವಿದೇಶಿ ವಿನಿಮಯ ರಿಸರ್ವ್ಗಳನ್ನು ವೃದ್ಧಿಸಲು ರೂಪಾಯಿ ಚಲಾವಣೆಯಲ್ಲಿ ಬದಲಾವಣೆ ಮಾಡಿದರು.
ತೆರಿಗೆ ಸುಧಾರಣೆಗಳು
ಸರಕು ಮತ್ತು ಸೇವೆಗಳ ತೆರಿಗೆಯನ್ನು ಸರಳಗೊಳಿಸಿ, ಆರ್ಥಿಕ ಪ್ರಕ್ರಿಯೆಗಳನ್ನು ಸುಗಮಗೊಳಿಸಿದರು.


